ನವದೆಹಲಿ (ಪಿಟಿಐ): ನಿತಿಶ್ ಕಠಾರ ಕೊಲೆ ಪ್ರಕರಣದ ಅಪರಾಧಿಗಳಿಗೆ ನೀಡಿರುವ ಜೀವಾವಧಿ ಶಿಕ್ಷೆಯನ್ನು ಗಲ್ಲು ಶಿಕ್ಷೆಗೆ ಹೆಚ್ಚಿಸಬೇಕು ಎಂದು ನೀಲಂ ಕಠಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ತಿರಸ್ಕರಿಸಿತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಗದೀಶ್ ಸಿಂಗ್ ಖೇಹರ್ ಮತ್ತು ಭಾನುಮತಿ ಅವರಿದ್ದ ನ್ಯಾಯಪೀಠ ನಿತಿಶ್ ಕಠಾರ ಅವರನ್ನು ಹತ್ಯೆ ಮಾಡಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವುದು ಬೇಡ, ಇದು ಮರ್ಯಾದೆಗೇಡಿ ಹತ್ಯೆಯಲ್ಲ ಎಂದು ಅಭಿಪ್ರಾಯಪಟ್ಟಿತು.
ನಿತಿಶ್ ಕಠಾರ ಅವರ ತಾಯಿ ನೀಲಂ ಕಠಾರ ಅವರು ಅಪರಾಧಿಗಳಾದ ವಿಶಾಲ್ ಮತ್ತು ವಿಕಾಸ್ ಯಾದವ್ ಸಹೋದರರಿಗೆ ದೆಹಲಿ ಹೈಕೋರ್ಟ್ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಗಲ್ಲು ಶಿಕ್ಷೆಗೆ ಹೆಚ್ಚಿಸಬೇಕು ಎಂದು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
2002ರಲ್ಲಿ ವಿಶಾಲ್ ಮತ್ತು ವಿಕಾಸ್ ಯಾದವ್ ಅವರು ನಿತಿಶ್ ಕಠಾರನನ್ನು ಅಪಹರಿಸಿ ಹತ್ಯೆ ಮಾಡಿದ್ದರು. ಇವರಿಗೆ ಸ್ಥಳೀಯ ನ್ಯಾಯಾಲಯ ಜೀವವಾಧಿ ಶಿಕ್ಷೆ ವಿಧಿಸಿತ್ತು.