ಬೆಂಗಳೂರು: ಮಾನಸಿಕ ಕಾಯಿಲೆಗಳಿಗೆ ತುತ್ತಾಗುವ ಹದಿಹರೆಯದವರಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ನಿಮ್ಹಾನ್ಸ್ನಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ ಎಂದು ನಿಮ್ಹಾನ್ಸ್ನ ನಿರ್ದೇಶಕ ಡಾ.ಬಿ.ಎನ್. ಗಂಗಾಧರ್ ‘ಪ್ರಜಾವಾಣಿ’ಗೆ ತಿಳಿಸಿದರು. ಈ ವಾರ್ಡ್ನಲ್ಲಿ ಕಾರ್ಯನಿರ್ವ ಹಿಸಲು ಪ್ರತ್ಯೇಕ ವೈದ್ಯರ ತಂಡ ರಚಿಸಲಾಗಿದ್ದು, ಸೋಮವಾರದಿಂದ ರೋಗಿ ಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದರು.