<p><strong>ಬೆಂಗಳೂರು:</strong> ಭೂಕಂಪದಿಂದ ತತ್ತರಿಸಿರುವ ನೇಪಾಳ ಪ್ರವಾಸದಲ್ಲಿರುವ 85 ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ. ಮತ್ತೊಂದೆಡೆ, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಹಾಯವಾಣಿ ಆರಂಭಿಸಿದೆ.</p>.<p>ನೇಪಾಳಕ್ಕೆ ತೆರಳಿರುವ ಕನ್ನಡಿಗರೊಂದಿಗೆ ರಾಜ್ಯ ಸರ್ಕಾರ ಮೊದಲ ಯತ್ನದಲ್ಲೇ ಸಂಪರ್ಕ ಸಾಧಿಸಿದ್ದು, ಗೋರಖ್ಪುರ ಮಾರ್ಗವಾಗಿ ನೇಪಾಳದಿಂದ ನಾಳೆ ಸಂಜೆ ವಾರಾಣಸಿಗೆ ತಲುಪಲಿದ್ದಾರೆ ಎಂಬ ವರದಿಗಳಿವೆ ಎಂದು ಸರ್ಕಾರವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p><strong>ಸಹಾಯವಾಣಿ ತೆರದ ಸರ್ಕಾರ: </strong>ನೇಪಾಳ ಹಾಗೂ ಉತ್ತರ ಭಾರತದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಕಾರ್ಯಾಲಯ ಸರಣಿ ಟ್ವೀಟ್ ಮಾಡಿದೆ.</p>.<p>ಅಲ್ಲದೇ, ಅಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯ ನಿಟ್ಟಿನಲ್ಲಿ ನೇಪಾಳದ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಲು ಇಬ್ಬರು ಅಧಿಕಾರಿಗಳನ್ನು ನಿಯೋಜಿಸಿರುವ ಸರ್ಕಾರ, ಸಹಾಯ ವಾಣಿಯನ್ನೂ ಸ್ಥಾಪಿಸಿದೆ.</p>.<p>ಮತ್ತೊಂದೆಡೆ, ಅಗತ್ಯ ಬಿದ್ದರೆ ನೆರೆಯ ನೇಪಾಳಕ್ಕೆ ವೈದ್ಯಕೀಯ ನೆರವಿಗಾಗಿ ವೈದ್ಯರ ತಂಡವನ್ನು ಕಳುಹಿಸಲು ಸಜ್ಜಾಗಿರುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.</p>.<p><strong>ಸಹಾಯವಾಣಿ ಕೊಠಡಿಯ ಸಂಖ್ಯೆ ಇಂತಿದೆ: </strong>1070/ 080-22340676/22032582/22353980</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭೂಕಂಪದಿಂದ ತತ್ತರಿಸಿರುವ ನೇಪಾಳ ಪ್ರವಾಸದಲ್ಲಿರುವ 85 ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ. ಮತ್ತೊಂದೆಡೆ, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಹಾಯವಾಣಿ ಆರಂಭಿಸಿದೆ.</p>.<p>ನೇಪಾಳಕ್ಕೆ ತೆರಳಿರುವ ಕನ್ನಡಿಗರೊಂದಿಗೆ ರಾಜ್ಯ ಸರ್ಕಾರ ಮೊದಲ ಯತ್ನದಲ್ಲೇ ಸಂಪರ್ಕ ಸಾಧಿಸಿದ್ದು, ಗೋರಖ್ಪುರ ಮಾರ್ಗವಾಗಿ ನೇಪಾಳದಿಂದ ನಾಳೆ ಸಂಜೆ ವಾರಾಣಸಿಗೆ ತಲುಪಲಿದ್ದಾರೆ ಎಂಬ ವರದಿಗಳಿವೆ ಎಂದು ಸರ್ಕಾರವು ಪ್ರಕಟಣೆಯಲ್ಲಿ ತಿಳಿಸಿದೆ.</p>.<p><strong>ಸಹಾಯವಾಣಿ ತೆರದ ಸರ್ಕಾರ: </strong>ನೇಪಾಳ ಹಾಗೂ ಉತ್ತರ ಭಾರತದಲ್ಲಿ ಸಂಭವಿಸಿರುವ ಪ್ರಬಲ ಭೂಕಂಪದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಕಾರ್ಯಾಲಯ ಸರಣಿ ಟ್ವೀಟ್ ಮಾಡಿದೆ.</p>.<p>ಅಲ್ಲದೇ, ಅಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಯ ನಿಟ್ಟಿನಲ್ಲಿ ನೇಪಾಳದ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರಲು ಇಬ್ಬರು ಅಧಿಕಾರಿಗಳನ್ನು ನಿಯೋಜಿಸಿರುವ ಸರ್ಕಾರ, ಸಹಾಯ ವಾಣಿಯನ್ನೂ ಸ್ಥಾಪಿಸಿದೆ.</p>.<p>ಮತ್ತೊಂದೆಡೆ, ಅಗತ್ಯ ಬಿದ್ದರೆ ನೆರೆಯ ನೇಪಾಳಕ್ಕೆ ವೈದ್ಯಕೀಯ ನೆರವಿಗಾಗಿ ವೈದ್ಯರ ತಂಡವನ್ನು ಕಳುಹಿಸಲು ಸಜ್ಜಾಗಿರುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.</p>.<p><strong>ಸಹಾಯವಾಣಿ ಕೊಠಡಿಯ ಸಂಖ್ಯೆ ಇಂತಿದೆ: </strong>1070/ 080-22340676/22032582/22353980</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>