ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈತಿಕ ಹಕ್ಕಿಲ್ಲ

Last Updated 11 ಫೆಬ್ರುವರಿ 2016, 19:30 IST
ಅಕ್ಷರ ಗಾತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೊಡುವ ವಾಚು ಮತ್ತು ಕನ್ನಡಕದ ಬೆಲೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ ಆರಂಭಿಸಿದ್ದಾರೆ. ದೃಶ್ಯ ಮಾಧ್ಯಮದಲ್ಲಂತೂ ಇದರ ಬಗ್ಗೆ ವಿಸ್ತೃತವಾದ ಚರ್ಚೆಯೇ ನಡೆದಿದೆ.

ಇಡೀ ಚರ್ಚೆಯು ಕುಮಾರಸ್ವಾಮಿಯವರ ರಾಜಕೀಯ ದಿವಾಳಿತನವನ್ನು ತೋರಿಸುತ್ತಿದೆ. ಅವರಿಗೆ ಸಿದ್ದರಾಮಯ್ಯಅವರ ಆಡಳಿತದ ವಿಚಾರದಲ್ಲಿ ಅಥವಾ ರಾಜ್ಯದ ಜನರ ಅಗತ್ಯಗಳ ಬಗ್ಗೆ ಮಾತನಾಡಲು ಯಾವ ವಿಷಯವೂ ಸಿಗುತ್ತಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಬೇರೆಯವರ ಸೈದ್ಧಾಂತಿಕ ನಿಲುವುಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕನ್ನು ಕಳೆದುಕೊಂಡಿರುವ ಕುಮಾರಸ್ವಾಮಿ ಪ್ರಬುದ್ಧರಾಗಿ ನಡೆದುಕೊಳ್ಳುವುದು ಒಳ್ಳೆಯದು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT