ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಮೂರ್ತಿ ವಿ.ಆರ್.ಕೃಷ್ಣ ಅಯ್ಯರ್ ಸ್ಮರಣೆ

Last Updated 19 ಡಿಸೆಂಬರ್ 2014, 19:57 IST
ಅಕ್ಷರ ಗಾತ್ರ

ಬೆಂಗಳೂರು: ‘ನ್ಯಾಯಮೂರ್ತಿಗಳಾಗಿ ವಿ.ಆರ್.ಕೃಷ್ಣ ಅಯ್ಯರ್‌ ಭಾರತೀಯ ಜನಮಾನಸದಲ್ಲಿ ದೀರ್ಘಕಾಲದ ವರೆಗೂ ಉಳಿಯುವ ದೊಡ್ಡ ವ್ಯಕ್ತಿತ್ವ’ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ವಿ.ಗೋಪಾಲಗೌಡ ಬಣ್ಣಿಸಿದರು.

ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಿವಂಗತ ನ್ಯಾಯಮೂರ್ತಿ ವಿ.ಆರ್.­-ಕೃಷ್ಣ ಅಯ್ಯರ್‌ ಅವರ ಸ್ಮರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಾಮಾಜಿಕ ನ್ಯಾಯ ವಿತರಣೆ­ಯಲ್ಲಿ ಅಯ್ಯರ್‌ ಅವರು ನ್ಯಾಯ­ಮೂರ್ತಿಯಾಗಿ ನೀಡಿದ ಕೊಡುಗೆ ಭಾರತೀಯ ಪ್ರಜಾಪ್ರಭುತ್ವಕ್ಕೆ ಬಹು­ದೊಡ್ಡ ಕಾಣ್ಕೆಯಾಗಿದೆ. ಶಿಕ್ಷೆಗೆ ಒಳಗಾ­ದವರ ಸಾಂವಿಧಾನಿಕ ಹಕ್ಕುಗಳನ್ನೂ ರಕ್ಷಿಸಬೇಕು ಎಂಬ ಅಯ್ಯರ್ ಅವರ ಜನಪರ ಧೋರಣೆ ಭಾರತೀಯ ದೀರ್ಘಕಾಲದವರೆಗೆ ಉಳಿಯುತ್ತವೆ’ ಎಂದರು.

ಅಖಿಲ ಭಾರತ ವಕೀಲರ ಸಂಘದ  ರಾಜ್ಯ ಘಟಕದ ಅಧ್ಯಕ್ಷ ಎಸ್.ಶಂಕರಪ್ಪ ಮಾತನಾಡಿ, ‘ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆಯುವಲ್ಲಿ ವಿ.ಆರ್.ಅಯ್ಯರ್ ನೇತೃತ್ವದಲ್ಲಿ ಜನ್ಮತಾಳಿದ ಅಖಿಲ ಭಾರತ ವಕೀಲರ ಸಂಘವು ಸಾಮಾಜಿಕ ಸೇವೆಯಲ್ಲಿ ಮಹತ್ವದ ಪಾತ್ರ ವಹಿಸಿದೆ’ ಎಂದರು. ಅಡ್ವೋಕೇಟ್ ಜನರಲ್ ಪ್ರೊ.ರವಿ­ವರ್ಮ ಕುಮಾರ್, ಹಿರಿಯ ವಕೀಲ ಕೆ.ಸುಬ್ಬರಾವ್, ಸಿ.ಬಿ.ಶ್ರೀನಿವಾಸನ್ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT