ಬೆಂಗಳೂರು: ಯಶವಂತಪುರ ಹೋಬಳಿಯ ಶ್ರೀಗಂಧಕಾವಲಿನ ಭೂಪರಿವರ್ತಿತ 4 ಎಕರೆ ಜಮೀನನ್ನು ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬರಿಗೆ ಪರಭಾರೆ ಮಾಡಿರುವ ಕ್ರಮ ಕುರಿತು ನ್ಯಾಯಾಂಗ ಅಥವಾ ಸಿಐಡಿ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ಸಿನ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು.
ವಿಧಾನಸೌಧದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಅಕ್ರಮ ಎಸಗಿ ಬಿಜೆಪಿ ವಿಧಾನಸಭಾ ಚುನಾವಣೆಗೆ ಕೋಟ್ಯಂತರ ರೂಪಾಯಿ ಕಿಕ್ಬ್ಯಾಕ್ ಪಡೆದುಕೊಂಡಿದೆ. ಸುಂದರೇಶ್ ಅವರಿಗೆ ನೀಡಿರುವ ಜಮೀನನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದು ಆಗ್ರಹಿಸಿದರು. ವಿಧಾನ ಪರಿಷತ್ ಸದಸ್ಯ ಎಚ್.ಎಂ. ರೇವಣ್ಣ ಉಪಸ್ಥಿತರಿದ್ದರು.