ನವದೆಹಲಿ (ಪಿಟಿಐ): ಭಾರತೀಯ ಪತ್ರಿಕಾ ಮಂಡಳಿಯ ಮುಂದಿನ ಅಧ್ಯಕ್ಷರನ್ನಾಗಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸಿ.ಕೆ. ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ನೇತೃತ್ವದ ಸಮಿತಿಯು ಪ್ರಸಾದ್ ಅವರನ್ನು ಆಯ್ಕೆ ಮಾಡಿದೆ. ಹಿಂದಿನ ಅಧ್ಯಕ್ಷ ನ್ಯಾ. ಮಾರ್ಕಂಡೇಯ ಕಟ್ಜು ಅವರ ಸ್ಥಾನವನ್ನು ಪ್ರಸಾದ್ ತುಂಬಲಿದ್ದಾರೆ.
ಈ ನೇಮಕಾತಿಯ ಮಾಹಿತಿ ತನಗೆ ತಲುಪಿರುವುದಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮೂಲಗಳು ಮಂಗಳವಾರ ತಿಳಿಸಿವೆ.