<p><strong>ಬೆಂಗಳೂರು</strong>: ಸೇವೆ ಮುಂದುವರಿಕೆ, ವೇತನವನ್ನು ತಿಂಗಳಿಗೆ ₹25 ಸಾವಿರಕ್ಕೆ ಹೆಚ್ಚಿಸಬೇಕು ಎಂಬುದೂ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಪದವಿ ಪರೀಕ್ಷೆ ಮತ್ತು ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಎಚ್ಚರಿಸಿದ್ದಾರೆ.<br /> <br /> ‘ಉನ್ನತ ಶಿಕ್ಷಣ ಸಚಿವರನ್ನು ಹಲವು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳೇ ನಮ್ಮನ್ನು ಕರೆದು ಚರ್ಚಿಸಬೇಕು’ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಿ.ರಾಜಶೇಖರ ಮೂರ್ತಿ, ಸಂಘದ ರಾಜ್ಯಾಧ್ಯಕ್ಷ ಎನ್. ಶ್ರೀನಿವಾಸಾಚಾರ್ ಹೇಳಿದರು.<br /> <br /> ಇದೇ ಬೇಡಿಕೆ ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಮತ್ತು ಡಿವೈಎಫ್ಐಆಶ್ರಯದಲ್ಲಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪನ್ಯಾಸಕರು ಧರಣಿ ನಡೆಸುತ್ತಿದ್ದಾರೆ.</p>.<p><strong>ಪ್ರಮುಖ ಬೇಡಿಕೆಗಳು ಏನೇನು?</strong><br /> 2016–17ನೇ ಸಾಲಿಗೆ ಆನ್ಲೈನ್ ಮೂಲಕ ಹೊಸದಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳದೆ ಈಗ ಸೇವೆ ಸಲ್ಲಿಸುತ್ತಿರುವವರನ್ನೇ ಮುಂದುವರಿಸಬೇಕು.</p>.<p>ಸೇವೆಯಲ್ಲಿ ವಿಲೀನಗೊಳ್ಳುವವರೆಗೆ ಮಾಸಿಕ ₹25 ಸಾವಿರದಂತೆ 12 ತಿಂಗಳು ವೇತನ ನೀಡಬೇಕು.<br /> <br /> ಕಳೆದ ಜನವರಿ 12 ರಿಂದ ಫೆಬ್ರುವರಿ 16ರ ವರೆಗೆ ಹೋರಾಟ ನಡೆಸಿದ ಅವಧಿಯಲ್ಲಿ ಕಡಿತಗೊಳಿಸಿರುವ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು.<br /> <br /> ಅತಿಥಿ ಉಪನ್ಯಾಸಕಿಯರಿಗೆ ವೇತನ ಸಹಿತ ಕನಿಷ್ಠ 3 ತಿಂಗಳು ಹೆರಿಗೆ ರಜೆ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸೇವೆ ಮುಂದುವರಿಕೆ, ವೇತನವನ್ನು ತಿಂಗಳಿಗೆ ₹25 ಸಾವಿರಕ್ಕೆ ಹೆಚ್ಚಿಸಬೇಕು ಎಂಬುದೂ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಪದವಿ ಪರೀಕ್ಷೆ ಮತ್ತು ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಎಚ್ಚರಿಸಿದ್ದಾರೆ.<br /> <br /> ‘ಉನ್ನತ ಶಿಕ್ಷಣ ಸಚಿವರನ್ನು ಹಲವು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳೇ ನಮ್ಮನ್ನು ಕರೆದು ಚರ್ಚಿಸಬೇಕು’ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಿ.ರಾಜಶೇಖರ ಮೂರ್ತಿ, ಸಂಘದ ರಾಜ್ಯಾಧ್ಯಕ್ಷ ಎನ್. ಶ್ರೀನಿವಾಸಾಚಾರ್ ಹೇಳಿದರು.<br /> <br /> ಇದೇ ಬೇಡಿಕೆ ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಮತ್ತು ಡಿವೈಎಫ್ಐಆಶ್ರಯದಲ್ಲಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪನ್ಯಾಸಕರು ಧರಣಿ ನಡೆಸುತ್ತಿದ್ದಾರೆ.</p>.<p><strong>ಪ್ರಮುಖ ಬೇಡಿಕೆಗಳು ಏನೇನು?</strong><br /> 2016–17ನೇ ಸಾಲಿಗೆ ಆನ್ಲೈನ್ ಮೂಲಕ ಹೊಸದಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳದೆ ಈಗ ಸೇವೆ ಸಲ್ಲಿಸುತ್ತಿರುವವರನ್ನೇ ಮುಂದುವರಿಸಬೇಕು.</p>.<p>ಸೇವೆಯಲ್ಲಿ ವಿಲೀನಗೊಳ್ಳುವವರೆಗೆ ಮಾಸಿಕ ₹25 ಸಾವಿರದಂತೆ 12 ತಿಂಗಳು ವೇತನ ನೀಡಬೇಕು.<br /> <br /> ಕಳೆದ ಜನವರಿ 12 ರಿಂದ ಫೆಬ್ರುವರಿ 16ರ ವರೆಗೆ ಹೋರಾಟ ನಡೆಸಿದ ಅವಧಿಯಲ್ಲಿ ಕಡಿತಗೊಳಿಸಿರುವ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕು.<br /> <br /> ಅತಿಥಿ ಉಪನ್ಯಾಸಕಿಯರಿಗೆ ವೇತನ ಸಹಿತ ಕನಿಷ್ಠ 3 ತಿಂಗಳು ಹೆರಿಗೆ ರಜೆ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>