ರಾಷ್ಟ್ರಪತಿ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಬಿ.ಕೆ.ಎಸ್ ಅಯ್ಯಂಗಾರ್ ಅವರಿಗೆ ಪದ್ಮವಿಭೂಷಣ ಮತ್ತು ಇಸ್ರೋ ಅಧ್ಯಕ್ಷ ಕೆ.ರಾಧಾಕೃಷ್ಣನ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು (ಕೆಳಗಿನ ಚಿತ್ರ).
ಇದೇ ಸಂದರ್ಭದಲ್ಲಿ ರಾಜ್ಯದ ಕೃಷಿ ವಿಜ್ಞಾನಿ ಎಂ.ಮಹಾದೇವಪ್ಪ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್) ನಿರ್ದೇಶಕ ಪಿ. ಬಲರಾಂ ಸೇರಿ 56 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ ನಡೆಯಿತು – ಪಿಟಿಐ ಚಿತ್ರಗಳು.