ನವದೆಹಲಿ: ಪಶ್ಚಿಮಘಟ್ಟ ಸಂರಕ್ಷಣೆ ಕುರಿತು ಡಾ. ಕಸ್ತೂರಿರಂಗನ್ ಸಮಿತಿ ನೀಡಿರುವ ವರದಿ ಬಗ್ಗೆ ಅಂತಿಮ ತೀರ್ಮಾನಕ್ಕೆ ಮೊದಲು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚಿಸುವುದಾಗಿ ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್ ಮಂಗಳವಾರ ಪುನರುಚ್ಚರಿಸಿದರು.
ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಏಳು ರಾಜ್ಯಗಳು ಬರಲಿದ್ದು, ಕಸ್ತೂರಿರಂಗನ್ ಸಮಿತಿ ಮೇಲೆ ನಿರ್ಧಾರ ಕೈಗೊಳ್ಳುವ ಮೊದಲು ಎಲ್ಲರ ಅಭಿಪ್ರಾಯ ಪಡೆಯುವುದಾಗಿ ಸಚಿವರು ವಿವರಿಸಿದರು.
ಸದ್ಯದಲ್ಲೇ ಮುಖ್ಯಮಂತ್ರಿಗಳ ಸಭೆ ಕರೆಯಲಾಗುವುದು. ಸಭೆಯ ದಿನಾಂಕ ನಿರ್ಧರಿಸಲಾಗುವುದು ಎಂದು ಅವರು ತಿಳಿಸಿದರು. ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತಂತೆ ಮಾಧವ ಗಾಡ್ಗೀಳ್ ಸಮಿತಿ ಕೂಡಾ ವರದಿ ಸಲ್ಲಿಸಿದ್ದು, ಕೇರಳ ಸೇರಿದಂತೆ ಅನೇಕ ರಾಜ್ಯಗಳು ಈ ವರದಿಯನ್ನು ಬಲವಾಗಿ ವಿರೋಧಿಸಿವೆ.