ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ಗೆ ಭಾರತ ಸೂಕ್ತ ಉತ್ತರ ನೀಡಿದೆ: ಬಿಕ್ರಮ್‌ ಸಿಂಗ್

Last Updated 31 ಜುಲೈ 2014, 10:19 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): 2013ರಲ್ಲಿ  ಭಾರತದ ಗಡಿ ನಿಯಂತ್ರಣಾ ರೇಖೆಯನ್ನು ದಾಟಿ ಭಾರತೀಯ ಸೈನಿಕರ ಶಿರಚ್ಛೇದನ  ಮಾಡಿದ್ದ ಪಾಕ್ ಸೇನೆಗೆ  ಭಾರತವು ಸೂಕ್ತ ಉತ್ತರ ನೀಡಿದೆ ಎಂದು ನಿವೃತ್ತಗೊಳ್ಳಲಿರುವ ಭೂಸೇನಾ ಮುಖ್ಯಸ್ಥ ಜನರಲ್ ಬಿಕ್ರಮ್ ಸಿಂಗ್ ಅವರು ಹೇಳಿದ್ದಾರೆ.

ಈ ವಿಷಯ ಕುರಿತು ಮಾಧ್ಯಗಳೊಂದಿಗೆ ಮಾತನಾಡಿದ ಅವರು ಪಾಕಿಸ್ತಾನದ ಈ ದುಷ್ಕೃತ್ಯಕ್ಕೆ ಭಾರತವು ಸೂಕ್ತ ಉತ್ತರ ನೀಡಿದೆ. ಇದು ಪಾಕಿಸ್ತಾನದ ಪೂರ್ವ ನಿಯೋಜಿತ ಕೃತ್ಯವಾಗಿದೆ ಎಂದರು.

ಘಟನೆಗೆ ಸಂಬಂಧಿಸಿದಂತೆ ಭಾರತೀಯ ರಕ್ಷಣಾ ಇಲಾಖೆಯ ವಿರುದ್ಧ ಹಲವು ಆರೋಪಗಳನ್ನು ಮಾಡಲಾಗಿತ್ತು. ಆದರೆ ಈ ಆರೋಪಗಳಲ್ಲಿ ಹುರುಳಿಲ್ಲ ಎಂದು  ಸಿಂಗ್ ಅವರು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT