<p><strong>ಲೇಹ್ (ಪಿಟಿಐ):</strong> ಸಾಂಪ್ರದಾಯಿಕ ಯುದ್ಧವನ್ನು ಮಾಡುವ ಸಾಮರ್ಥ್ಯ ಕಳೆದುಕೊಂಡಿರುವ ಪಾಕಿಸ್ತಾನವು ಭಾರತದ ವಿರುದ್ಧ ಭಯೋತ್ಪಾದನೆಯ ಪರೋಕ್ಷ ಸಮರ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜರಿದಿದ್ದಾರೆ.</p>.<p>ಇದೇ ಮೊದಲ ಬಾರಿಗೆ ಲೇಹ್ ಹಾಗೂ ಲಡಾಖ್ ಪ್ರವಾಸ ಕೈಗೊಂಡಿರುವ ಪ್ರಧಾನಿ ಅವರು ಭೂಸೇನೆ ಹಾಗೂ ವಾಯು ಸೇನೆಯ ಯೋಧರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ನೆರೆಯ ರಾಷ್ಟ್ರವು ಸಾಂಪ್ರದಾಯಿಕ ಯುದ್ಧ ಮಾಡುವ ಬಲ ಕಳೆದುಕೊಂಡಿದೆ. ಆದರೆ ಭಯೋತ್ಪಾದನೆಯ ಪರೋಕ್ಷ ಸಮರವನ್ನು ಮುಂದುವರಿಸಿದೆ’ ಎಂದು ಮೋದಿ ಅವರು ಟೀಕಿಸಿದ್ದಾರೆ.</p>.<p>ಭಾರತೀಯ ಸಶಸ್ತ್ರ ಪಡೆಗಳಲ್ಲಿ ಯುದ್ಧಕ್ಕಿಂತಲೂ ಹೆಚ್ಚಾಗಿ ಭಯೋತ್ಪಾದನೆಯಿಂದ ಸಾವುಗಳಾಗುತ್ತಿವೆ. ಆದರೆ ಇದೊಂದು ಜಾಗತಿಕ ಸಮಸ್ಯೆಯಾಗಿದ್ದು, ಇದರ ವಿರುದ್ಧ ಸಮರಕ್ಕಾಗಿ ಮಾನವತಾವಾದ ಪ್ರತಿಪಾದಿಸುವ ಎಲ್ಲಾ ಪಡೆಗಳು ಒಗ್ಗೂಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.</p>.<p>ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಉಗ್ರರ ವಿರುದ್ಧದ ಕಾಳಗದಲ್ಲಿ ಒಬ್ಬ ಅಧಿಕಾರಿ ಸೇರಿದಂತೆ ಸೇನೆಯ ಎಂಟು ಸಿಬ್ಬಂದಿ ಗಾಯಗೊಂಡ ಘಟನೆಯ ಹಿನ್ನೆಲೆ ಮೋದಿ ಅವರು ಈ ಅಭಿಪ್ರಾಯ ಹೊರ ಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೇಹ್ (ಪಿಟಿಐ):</strong> ಸಾಂಪ್ರದಾಯಿಕ ಯುದ್ಧವನ್ನು ಮಾಡುವ ಸಾಮರ್ಥ್ಯ ಕಳೆದುಕೊಂಡಿರುವ ಪಾಕಿಸ್ತಾನವು ಭಾರತದ ವಿರುದ್ಧ ಭಯೋತ್ಪಾದನೆಯ ಪರೋಕ್ಷ ಸಮರ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜರಿದಿದ್ದಾರೆ.</p>.<p>ಇದೇ ಮೊದಲ ಬಾರಿಗೆ ಲೇಹ್ ಹಾಗೂ ಲಡಾಖ್ ಪ್ರವಾಸ ಕೈಗೊಂಡಿರುವ ಪ್ರಧಾನಿ ಅವರು ಭೂಸೇನೆ ಹಾಗೂ ವಾಯು ಸೇನೆಯ ಯೋಧರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ನೆರೆಯ ರಾಷ್ಟ್ರವು ಸಾಂಪ್ರದಾಯಿಕ ಯುದ್ಧ ಮಾಡುವ ಬಲ ಕಳೆದುಕೊಂಡಿದೆ. ಆದರೆ ಭಯೋತ್ಪಾದನೆಯ ಪರೋಕ್ಷ ಸಮರವನ್ನು ಮುಂದುವರಿಸಿದೆ’ ಎಂದು ಮೋದಿ ಅವರು ಟೀಕಿಸಿದ್ದಾರೆ.</p>.<p>ಭಾರತೀಯ ಸಶಸ್ತ್ರ ಪಡೆಗಳಲ್ಲಿ ಯುದ್ಧಕ್ಕಿಂತಲೂ ಹೆಚ್ಚಾಗಿ ಭಯೋತ್ಪಾದನೆಯಿಂದ ಸಾವುಗಳಾಗುತ್ತಿವೆ. ಆದರೆ ಇದೊಂದು ಜಾಗತಿಕ ಸಮಸ್ಯೆಯಾಗಿದ್ದು, ಇದರ ವಿರುದ್ಧ ಸಮರಕ್ಕಾಗಿ ಮಾನವತಾವಾದ ಪ್ರತಿಪಾದಿಸುವ ಎಲ್ಲಾ ಪಡೆಗಳು ಒಗ್ಗೂಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.</p>.<p>ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಉಗ್ರರ ವಿರುದ್ಧದ ಕಾಳಗದಲ್ಲಿ ಒಬ್ಬ ಅಧಿಕಾರಿ ಸೇರಿದಂತೆ ಸೇನೆಯ ಎಂಟು ಸಿಬ್ಬಂದಿ ಗಾಯಗೊಂಡ ಘಟನೆಯ ಹಿನ್ನೆಲೆ ಮೋದಿ ಅವರು ಈ ಅಭಿಪ್ರಾಯ ಹೊರ ಬಿದ್ದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>