ನವದೆಹಲಿ(ಪಿಟಿಐ): ಒಡಿಶಾದಲ್ಲಿ ಆದಿತ್ಯ ಬಿರ್ಲಾ ಸಮೂಹದ ಹಿಂಡಾಲ್ಕೊ ಕಂಪೆನಿಗೆ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಮಾಡಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪ ಎದುರಿಸುತ್ತಿರುವ ಕಲ್ಲಿದ್ದಲು ಸಚಿವಾಲಯದ ನಿವೃತ್ತ ಕಾರ್ಯದರ್ಶಿ ಪಿ.ಸಿ. ಪಾರೇಖ್ ಇದೇ 25ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ತಮ್ಮ ವಿರುದ್ಧ ಪ್ರಕರಣ ದಾಖ ಲಿಸಿದ್ದಕ್ಕೆ ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾರನ್ನು ಟೀಕಿಸಿದ್ದ ಪಾರೇಖ್ ಈಗ ಕೋರ್ಟ್ಗೆ ಹಾಜರಾಗಬೇಕಾಗಿದೆ.