ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ: ಅರ್ಜಿ ಆಹ್ವಾನಕ್ಕೆ ಒತ್ತಾಯ

Last Updated 18 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನಿಸುವಂತೆ ಒತ್ತಾಯಿಸಿ ಹುದ್ದೆಯ ಆಕಾಂಕ್ಷಿಗಳು ಇದೇ 21ರಿಂದ ಎರಡು ದಿನಗಳ ಕಾಲ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

‘ಸರ್ಕಾರ 2009ರಿಂದ ಪಿಎಸ್‌ಐ ಹುದ್ದೆಗೆ ಅರ್ಜಿ ಆಹ್ವಾನಿಸಿಲ್ಲ. ಇದರಿಂದಾಗಿ ಎಸ್ಐ ಆಗಬೇಕೆಂಬ ಕನಸು ಕಟ್ಟಿಕೊಂಡು ಅಭ್ಯಾಸ ನಡೆಸಿದವರ ವಯೋಮಿತಿ ಮೀರುತ್ತಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪಿಎಸ್‌ಐ ಹುದ್ದೆಗೆ ವಯೋಮಿತಿ ಕಡಿಮೆ ಇದೆ. ಹೀಗಾಗಿ ಸರ್ಕಾರ ಕೂಡಲೇ ವಯೋಮಿತಿ­ಯನ್ನು ಏರಿಸಿ ಹುದ್ದೆಗೆ ಅರ್ಜಿ ಆಹ್ವಾನಿಸಬೇಕು’ ಎಂದು ಪ್ರತಿಭ­ಟನಾಕಾರರು ಒತ್ತಾಯಿಸಿ­ದ್ದಾರೆ.

‘ಹುದ್ದೆಯ ಎಲ್ಲ ಆಕಾಂಕ್ಷಿಗಳು  ಈ ಹೋರಾಟದಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಸಮಸ್ಯೆಯ ಗಂಭೀರತೆಯ ಅರಿವು ಮೂಡಿಸಬೇಕು’ ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT