<p>ಬೆಂಗಳೂರು: ಹಿರಿಯ ಹಿಂದೂಸ್ತಾನಿ ಗಾಯಕ ಪಂ.ನಾಗರಾಜರಾವ್ ಹವಾಲ್ದಾರ್ ಅವರಿಗೆ ಈ ಬಾರಿಯ ನಿರ್ಮಾಣ್ ಪುರಂದರ ಸಂಗೀತರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬನ್ನೇರುಘಟ್ಟ ಸಮೀಪದ ನಿಸರ್ಗ ಬಡಾವಣೆಯ ಪುರಂದರ ಮಂಟಪದಲ್ಲಿ ಈಚೆಗೆ ನಡೆದ ದಾಸರ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಗೋಪಾಲ್ .ಬಿ. ಹೊಸೂರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.<br /> <br /> ನಿರ್ಮಾಣ್ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ವಿ. ಲಕ್ಷ್ಮೀನಾರಾಯಣ ಅವರು ಮಾತನಾಡಿ, ಇಂದಿನ ಆಧುನಿಕ ಪೀಳಿಗೆಯು ತಮ್ಮಲ್ಲಿ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಪುರಂದರದಾಸರ ಸಾಹಿತ್ಯವು ಪ್ರಮುಖ ಪಾತ್ರ ವಹಿಸಬಲ್ಲದು ಎಂದರು.<br /> <br /> ಸಂಗೀತ ವಿದ್ಯಾನಿಧಿ ವಿದ್ಯಾಭೂಷಣ ಅವರು ಮಾತನಾಡಿ, ಕರ್ನಾಟಕ ಸಂಗೀತ ಪಿತಾಮಹ ಪುರಂದರದಾಸರ ಹೆಸರಿನಲ್ಲಿ ಸಂಸ್ಥೆ ಪ್ರತಿವರ್ಷ ಆರಾಧನಾ ಮಹೋತ್ಸವದಂದು ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ ಎಂದರು.<br /> <br /> ದಾಸರ ಆರಾಧನೆ ಪ್ರಯುಕ್ತ ಪುರಂದರ ಮಂಟಪದಲ್ಲಿ ಶಂಕರ ಶಾನುಭಾಗ್, ವಿದ್ಯಾಭೂಷಣ, ನಾಗಮಣಿ ಶ್ರೀನಾಥ್ ಮತ್ತು ನಾಗರಾಜ್ ಹವಾಲ್ದಾರ್ ಅವರ ಗಾಯನ ಕಾರ್ಯಕ್ರಮವೂ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಹಿರಿಯ ಹಿಂದೂಸ್ತಾನಿ ಗಾಯಕ ಪಂ.ನಾಗರಾಜರಾವ್ ಹವಾಲ್ದಾರ್ ಅವರಿಗೆ ಈ ಬಾರಿಯ ನಿರ್ಮಾಣ್ ಪುರಂದರ ಸಂಗೀತರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬನ್ನೇರುಘಟ್ಟ ಸಮೀಪದ ನಿಸರ್ಗ ಬಡಾವಣೆಯ ಪುರಂದರ ಮಂಟಪದಲ್ಲಿ ಈಚೆಗೆ ನಡೆದ ದಾಸರ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಗೋಪಾಲ್ .ಬಿ. ಹೊಸೂರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.<br /> <br /> ನಿರ್ಮಾಣ್ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ವಿ. ಲಕ್ಷ್ಮೀನಾರಾಯಣ ಅವರು ಮಾತನಾಡಿ, ಇಂದಿನ ಆಧುನಿಕ ಪೀಳಿಗೆಯು ತಮ್ಮಲ್ಲಿ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಪುರಂದರದಾಸರ ಸಾಹಿತ್ಯವು ಪ್ರಮುಖ ಪಾತ್ರ ವಹಿಸಬಲ್ಲದು ಎಂದರು.<br /> <br /> ಸಂಗೀತ ವಿದ್ಯಾನಿಧಿ ವಿದ್ಯಾಭೂಷಣ ಅವರು ಮಾತನಾಡಿ, ಕರ್ನಾಟಕ ಸಂಗೀತ ಪಿತಾಮಹ ಪುರಂದರದಾಸರ ಹೆಸರಿನಲ್ಲಿ ಸಂಸ್ಥೆ ಪ್ರತಿವರ್ಷ ಆರಾಧನಾ ಮಹೋತ್ಸವದಂದು ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ ಎಂದರು.<br /> <br /> ದಾಸರ ಆರಾಧನೆ ಪ್ರಯುಕ್ತ ಪುರಂದರ ಮಂಟಪದಲ್ಲಿ ಶಂಕರ ಶಾನುಭಾಗ್, ವಿದ್ಯಾಭೂಷಣ, ನಾಗಮಣಿ ಶ್ರೀನಾಥ್ ಮತ್ತು ನಾಗರಾಜ್ ಹವಾಲ್ದಾರ್ ಅವರ ಗಾಯನ ಕಾರ್ಯಕ್ರಮವೂ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>