ನವದೆಹಲಿ (ಪಿಟಿಐ): ಹೊಟ್ಟೆನೋವಿನ ಕಾರಣ ಸೇನಾ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಶನಿವಾರ ದಾಖ ಲಾಗಿದ್ದ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ಆ್ಯಂಜಿಯೊಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಶನಿವಾರ ಬೆಳಿಗ್ಗೆ ಹೊಟ್ಟೆನೋವು ಕಾಣಿಸಿಕೊಂಡ ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವಿವಿಧ ವೈದ್ಯಕೀಯ ತಪಾಸಣೆ ನಡೆಸುವ ವೇಳೆ ಹೃದಯದ ರಕ್ತನಾಳದಲ್ಲಿ ಅತಿಯಾದ ಕೊಬ್ಬಿನಂಶ ಪತ್ತೆಯಾದ ಕಾರಣ ಸ್ಟೆಂಟ್ ಅಳವಡಿಸಲು ವೈದ್ಯರು ನಿರ್ಧರಿಸಿದರು ಎಂದು ಮೂಲಗಳು ತಿಳಿಸಿವೆ.
‘ರಾಷ್ಟ್ರಪತಿಯವರ ಆರೋಗ್ಯ ಹತೋಟಿಯಲ್ಲಿದೆ. ಸೋಮವಾರದ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆಯಾ ಗುವ ನಿರೀಕ್ಷೆಯಿದೆ ಎಂದು ರಾಷ್ಟ್ರಪತಿ ಕಚೇರಿಯ ಪತ್ರಿಕಾ ಕಾರ್ಯದರ್ಶಿ ವೇಣು ರಾಜಮಣಿ ತಿಳಿಸಿದ್ದಾರೆ.