ನವದೆಹಲಿ(ಐಎಎನ್ ಎಸ್): ದೆಹಲಿ ವಿಧಾನಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಇಲ್ಲ. ಬದಲಿಗೆ, ಸ್ಪಷ್ಟವಾದ ದೂರದೃಷ್ಟಿ ಕಾರ್ಯಕ್ರಮಗಳಿವೆ. ಅವುಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಅವರು ಬಿಡುಗಡೆ ಮಾಡಲಿದ್ದಾರೆ ಎಂದು ಗುರುವಾರ ಬಿಜೆಪಿ ಹೇಳಿದೆ.
‘ಬಿಜೆಪಿ ಪ್ರಣಾಳಿಕೆಗಳನ್ನು ಮುಂದಿಟ್ಟುಕೊಂಡು ಫೆ. 7ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆ ಎದುರಿಸುವುದಿಲ್ಲ. ಸ್ಪಷ್ಟವಾದ ದೂರದೃಷ್ಟಿಯ ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಿಡುಗಡೆ ಮಾಡಲಿದ್ದಾರೆ’ ಎಂದು ಪಕ್ಷದ ಹಿರಿಯ ಮುಖಂಡ ಅನಂತ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ನರೇಂದ್ರ ಮೋದಿ ಅವರು ಜ. 31, ಫೆ. 1, 3 ಹಾಗೂ 4ರಂದು ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿ ಪಕ್ಷದ ಪ್ರಚಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿಲಿದ್ದಾರೆ. ಪಕ್ಷದ ದೆಹಲಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ ಫೆ. 6ರ ವರೆಗೆ ನಡೆಯುವ ಎಲ್ಲಾ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.