ಜಲಗಾಂವ್ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ 2005ರಲ್ಲಿ ನಡೆದ ಕಾಂಗ್ರೆಸ್ ಮುಖಂಡರೊಬ್ಬರ ಕೊಲೆ ಪ್ರಕರಣದಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಕಿರಿಯ ಸಹೋದರ ಗಜೇಂದ್ರಸಿಂಗ್ ಪಾಟೀಲ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಕಾಂಗ್ರೆಸ್ ಮುಖಂಡ ಪ್ರೊ.ವಿ.ಜಿ.ಪಾಟೀಲ್ ಅವರ ಕಾರಿಗೆ ಕಲ್ಲು ಎಸೆದು, ನಂತರ ಅವರನ್ನು ಇರಿದು ಕೊಲ್ಲಲಾಗಿತ್ತು. ಇದು ರಾಜಕೀಯ ದ್ವೇಷದ ಕೊಲೆ ಎಂದು ಹೇಳಲಾಗಿತ್ತು.
ಪ್ರಕರಣದ ಸಂಚು ನಡೆಸಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಇವರಿಬ್ಬರು ಗಜೇಂದ್ರಸಿಂಗ್ ಹೆಸರು ಬಾಯಿಬಿಟ್ಟಿದ್ದಾರೆ.
ಈ ಪ್ರಕರಣದಲ್ಲಿ ಸಿಬಿಐ ಗಜೇಂದ್ರಸಿಂಗ್ ಅವರನ್ನು ರಕ್ಷಿಸುತ್ತಿದೆ ಎಂದು ವಿ.ಜಿ.ಪಾಟೀಲ್ ಪತ್ನಿ ರಜನಿ ಪಾಟೀಲ್ ಆರೋಪಿಸಿದ್ದಾರೆ.
ಪ್ರೊ.ಪಾಟೀಲ್ ಅವರು ಜಲಗಾಂವ್ ಜಿಲ್ಲಾ ಕಾಂಗ್ರೆಸ್್ ಸಮಿತಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಗಜೇಂದ್ರಸಿಂಗ್್ ಅವರನ್ನು ಸೋಲಿಸಿದ್ದರು. ಇದಾದ ಒಂದು ತಿಂಗಳ ಬಳಿಕ ಪಾಟೀಲ್ ಕೊಲೆಯಾದರು.