<p><strong>ಹಾವೇರಿ: </strong>`ಶಿಕ್ಷಣ ನಿಂತ ನೀರಲ್ಲ, ಸದಾ ಹರಿಯುತ್ತಿ ರುವ ನೀರು ಎಂಬುದನ್ನು ಅರಿತು ಶಿಕ್ಷಕರು ಮಕ್ಕಳಿಗೆ ಬೋಧನೆ ಮಾಡಬೇಕಲ್ಲದೇ, ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಉತ್ತಮ ಸಾಧನೆ ನಿರೀಕ್ಷಿಸಲು ಸಾಧ್ಯ~ ಎಂದು ನಿವೃತ್ತ ಮುಖ್ಯಾಧ್ಯಾಪಕ ಆರ್.ಕೆ.ಬೆಳ್ಳಿಗಟ್ಟಿ ಹೇಳಿದರು. <br /> <br /> ನಗರದ ಹುಕ್ಕೇರಿಮಠದ ಶಿವಲಿಂಗೇಶ್ವರ ಡಿ.ಇಡಿ. ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ದ್ವಿತೀಯ ವರ್ಷದ ಡಿ.ಇಡಿ. ಪ್ರಶಿಕ್ಷಣಾರ್ಥಿಗಳ ಬೀಳ್ಕೊಡುಗೆ ಹಾಗೂ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> ಪ್ರಾಮಾಣಿಕ ಆದರ್ಶಗುಣಗಳನ್ನು ಬೆಳೆಸಿಕೊಂಡು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು. ಆದರ್ಶ ಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.<br /> ಜಿಲ್ಲಾ ಡಯಟ್ ಪ್ರಾಚಾರ್ಯ ಎಂ.ಡಿ.ಬಳ್ಳಾರಿ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕ ವೃತ್ತಿ ಬಹಳ ಜವಾಬ್ದಾರಿಯುತವಾಗಿದ್ದು, ಪ್ರಶಿಕ್ಷಣಾರ್ಥಿಗಳು ವೃತ್ತಿ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ದಲ್ಲಿ ಉತ್ತಮ ಶಿಕ್ಷರಾಗಬೇಕೆಂದು ಸಲಹೆ ಮಾಡಿದರು.<br /> <br /> ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಶಿವಾನಂದ ಜಾಣನವರ, ಪ್ರೇಮಾ ಹೊಸಮನಿ, ಗಿರೀಶ ಗಡ್ಡದ, ಪಿ.ಶಿಲ್ಪಾ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯ ಬಿ.ಬಸವರಾಜ ಅವರನ್ನು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸನ್ಮಾನಿಸಿದರು. <br /> <br /> ಜಿ.ವಿ.ಪಾಟಕ, ಸಿ.ಬಿ.ವೀರಪ್ಪನವರ, ಪಿ.ಬಿ.ಮುದ್ದಿ, ಡಾ.ಗದಿಗೇಪ್ಪ ಜೋಶಿ, ಎಸ್.ಎಸ್. ಹಿರೇಮಠ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಪೂರ್ಣಿಮಾ ಗುತ್ತಲ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶೃತಿ ಮಠದ ಸ್ವಾಗತಿಸಿದರು. ವಿಜಯ ಲಕ್ಷ್ಮೀ ಜಿಗಳಿ ನಿರೂಪಿಸಿ, ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>`ಶಿಕ್ಷಣ ನಿಂತ ನೀರಲ್ಲ, ಸದಾ ಹರಿಯುತ್ತಿ ರುವ ನೀರು ಎಂಬುದನ್ನು ಅರಿತು ಶಿಕ್ಷಕರು ಮಕ್ಕಳಿಗೆ ಬೋಧನೆ ಮಾಡಬೇಕಲ್ಲದೇ, ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಉತ್ತಮ ಸಾಧನೆ ನಿರೀಕ್ಷಿಸಲು ಸಾಧ್ಯ~ ಎಂದು ನಿವೃತ್ತ ಮುಖ್ಯಾಧ್ಯಾಪಕ ಆರ್.ಕೆ.ಬೆಳ್ಳಿಗಟ್ಟಿ ಹೇಳಿದರು. <br /> <br /> ನಗರದ ಹುಕ್ಕೇರಿಮಠದ ಶಿವಲಿಂಗೇಶ್ವರ ಡಿ.ಇಡಿ. ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ದ್ವಿತೀಯ ವರ್ಷದ ಡಿ.ಇಡಿ. ಪ್ರಶಿಕ್ಷಣಾರ್ಥಿಗಳ ಬೀಳ್ಕೊಡುಗೆ ಹಾಗೂ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು. <br /> <br /> ಪ್ರಾಮಾಣಿಕ ಆದರ್ಶಗುಣಗಳನ್ನು ಬೆಳೆಸಿಕೊಂಡು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು. ಆದರ್ಶ ಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.<br /> ಜಿಲ್ಲಾ ಡಯಟ್ ಪ್ರಾಚಾರ್ಯ ಎಂ.ಡಿ.ಬಳ್ಳಾರಿ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕ ವೃತ್ತಿ ಬಹಳ ಜವಾಬ್ದಾರಿಯುತವಾಗಿದ್ದು, ಪ್ರಶಿಕ್ಷಣಾರ್ಥಿಗಳು ವೃತ್ತಿ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ದಲ್ಲಿ ಉತ್ತಮ ಶಿಕ್ಷರಾಗಬೇಕೆಂದು ಸಲಹೆ ಮಾಡಿದರು.<br /> <br /> ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಶಿವಾನಂದ ಜಾಣನವರ, ಪ್ರೇಮಾ ಹೊಸಮನಿ, ಗಿರೀಶ ಗಡ್ಡದ, ಪಿ.ಶಿಲ್ಪಾ ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯ ಬಿ.ಬಸವರಾಜ ಅವರನ್ನು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಸನ್ಮಾನಿಸಿದರು. <br /> <br /> ಜಿ.ವಿ.ಪಾಟಕ, ಸಿ.ಬಿ.ವೀರಪ್ಪನವರ, ಪಿ.ಬಿ.ಮುದ್ದಿ, ಡಾ.ಗದಿಗೇಪ್ಪ ಜೋಶಿ, ಎಸ್.ಎಸ್. ಹಿರೇಮಠ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಪೂರ್ಣಿಮಾ ಗುತ್ತಲ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶೃತಿ ಮಠದ ಸ್ವಾಗತಿಸಿದರು. ವಿಜಯ ಲಕ್ಷ್ಮೀ ಜಿಗಳಿ ನಿರೂಪಿಸಿ, ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>