<p><strong>ಉಡುಪಿ: </strong>ಕರಾವಳಿ ಭಾಗಕ್ಕೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಹಾಗೂ ಪ್ರತ್ಯೇಕ ತುಳುನಾಡ ರಚನೆಗೆ ಆಗ್ರಹಿಸಿ ತುಳುನಾಡ ರಕ್ಷಣಾ ವೇದಿಕೆಯ ಸದಸ್ಯರು ನಗರದಲ್ಲಿ ಭಾನುವಾರ ಕರಾಳ ದಿನವನ್ನು ಆಚರಿಸಿದರು. ಸರ್ವೀಸ್ ಬಸ್ ನಿಲ್ದಾಣ ಎದುರು ಪ್ರತಿಭಟನಾ ಸಭೆ ನಡೆಸಿದ ಅವರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.<br /> <br /> ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಐಕಳ ಬಾವ ಚಿತ್ತರಂಜನ್ದಾಸ್ ಶೆಟ್ಟಿ ಮಾತನಾಡಿ, ತುಳುನಾಡಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಪರಿಸರಕ್ಕೆ ಮಾರಕ ಆಗುವ ಬೃಹತ್ ಕೈಗಾರಿಕಾ ಯೋಜನೆಗಳನ್ನು ಈ ಭಾಗದಲ್ಲಿ ಆರಂಭಿಸಲಾಗಿದ್ದು, ಇಂತಹ ಇನ್ನೂ ಹಲವು ಯೋಜನೆಗಳನ್ನು ಈ ಭಾಗಕ್ಕೆ ತರುವ ಪ್ರಯತ್ನಗಳು ನಡೆಯು ತ್ತಿವೆ. ಇದು ಹೀಗೆ ಮುಂದುವರಿದರೆ ಕರಾವಳಿ ಕಸದ ಬುಟ್ಟಿಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ನೇತ್ರಾವತಿ ನದಿ ತಿರುವು ಯೋಜನೆಯನ್ನು ಜಾರಿ ಮಾಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿಯನ್ನು ಬತ್ತಿಸಲು ಮುಂದಾಗಿದ್ದಾರೆ. ಈ ಯೋಜನೆ ಜಾರಿಗೊಂಡರೆ ಭೂಮಿ ಬರಡಲಾಗಲಿದೆ. ಅಲ್ಲದೆ ಮೂಢ ನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ಮುಂದಾಗಿರುವ ಸರ್ಕಾರ ಈ ಭಾಗದ ಜನರ ಆಚರಣೆ ಹಾಗೂ ನಂಬಿಕೆಗೆ ಪೆಟ್ಟು ನೀಡುತ್ತಿದೆ. ನಮ್ಮ ಆಚಾರ ವಿಚಾರಗಳ ಮೇಲೆ ಪ್ರಹಾರ ನಡೆಸಲಾಗುತ್ತಿದೆ ಎಂದು ದೂರಿದರು.<br /> <br /> ಸಂಘಟನೆಯ ಮುಖಂಡರಾದ ಅಜರುದ್ದೀನ್, ರೋಹಿತ್ ಕರಂಬಳ್ಳಿ, ನಜೀರ್ ಕೋಟೇಶ್ವರ, ಕೆ. ಗೋಪಾಲಕೃಷ್ಣ, ದಿನೇಶ್ ಶೆಟ್ಟಿ ಎರ್ಮಾಳ್ ಉಪಸ್ಥಿತರಿದ್ದರು.<br /> <br /> <strong>ಪ್ರಮುಖ ಬೇಡಿಕೆಗಳು:</strong> ತುಳುನಾಡ ಎಲ್ಲ ಪ್ರದೇಶಗಳನ್ನು ಒಟ್ಟುಗೂಡಿಸಿ ತುಳುನಾಡು ಪ್ರತ್ಯೇಕ ರಾಜ್ಯ ರಚನೆ ಮಾಡಬೇಕು. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸಬೇಕು. ತುಳುನಾಡ ಜನರ ನಂಬಿಕೆ, ಆಚಾರ ವಿಚಾರಗಳಿಗೆ ಮಾರಕ ಆಗುವ ಮೂಢನಂಬಿಕೆ ನಿಷೇಧ ಕಾಯ್ದೆ ಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು.<br /> <br /> ಆಡಳಿತ ಹಾಗೂ ಎಲ್ಲ ವ್ಯವಹಾರಗಳನ್ನು ತುಳು ಭಾಷೆಯ ಲ್ಲಿಯೇ ನಡೆಸಲು ಕ್ರಮ ಕೈಗೊಳ್ಳಬೇಕು. ನೇತ್ರಾವದಿ ನದಿ ತಿರುವು ಯೋಜನೆ ಯನ್ನೂ ಈ ಕೂಡಲೇ ನಿಲ್ಲಿಸಬೇಕು. ತುಳುನಾಡಿನ ಪರಿಸರಕ್ಕೆ ಮಾರಕ ವಾಗುವ ಯಾವುದೇ ಕೈಗಾರಿಕೆಗಳನ್ನು ಆರಂಭಿಸಬಾರದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಕರಾವಳಿ ಭಾಗಕ್ಕೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಹಾಗೂ ಪ್ರತ್ಯೇಕ ತುಳುನಾಡ ರಚನೆಗೆ ಆಗ್ರಹಿಸಿ ತುಳುನಾಡ ರಕ್ಷಣಾ ವೇದಿಕೆಯ ಸದಸ್ಯರು ನಗರದಲ್ಲಿ ಭಾನುವಾರ ಕರಾಳ ದಿನವನ್ನು ಆಚರಿಸಿದರು. ಸರ್ವೀಸ್ ಬಸ್ ನಿಲ್ದಾಣ ಎದುರು ಪ್ರತಿಭಟನಾ ಸಭೆ ನಡೆಸಿದ ಅವರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.<br /> <br /> ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಐಕಳ ಬಾವ ಚಿತ್ತರಂಜನ್ದಾಸ್ ಶೆಟ್ಟಿ ಮಾತನಾಡಿ, ತುಳುನಾಡಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಪರಿಸರಕ್ಕೆ ಮಾರಕ ಆಗುವ ಬೃಹತ್ ಕೈಗಾರಿಕಾ ಯೋಜನೆಗಳನ್ನು ಈ ಭಾಗದಲ್ಲಿ ಆರಂಭಿಸಲಾಗಿದ್ದು, ಇಂತಹ ಇನ್ನೂ ಹಲವು ಯೋಜನೆಗಳನ್ನು ಈ ಭಾಗಕ್ಕೆ ತರುವ ಪ್ರಯತ್ನಗಳು ನಡೆಯು ತ್ತಿವೆ. ಇದು ಹೀಗೆ ಮುಂದುವರಿದರೆ ಕರಾವಳಿ ಕಸದ ಬುಟ್ಟಿಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ನೇತ್ರಾವತಿ ನದಿ ತಿರುವು ಯೋಜನೆಯನ್ನು ಜಾರಿ ಮಾಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿಯನ್ನು ಬತ್ತಿಸಲು ಮುಂದಾಗಿದ್ದಾರೆ. ಈ ಯೋಜನೆ ಜಾರಿಗೊಂಡರೆ ಭೂಮಿ ಬರಡಲಾಗಲಿದೆ. ಅಲ್ಲದೆ ಮೂಢ ನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ಮುಂದಾಗಿರುವ ಸರ್ಕಾರ ಈ ಭಾಗದ ಜನರ ಆಚರಣೆ ಹಾಗೂ ನಂಬಿಕೆಗೆ ಪೆಟ್ಟು ನೀಡುತ್ತಿದೆ. ನಮ್ಮ ಆಚಾರ ವಿಚಾರಗಳ ಮೇಲೆ ಪ್ರಹಾರ ನಡೆಸಲಾಗುತ್ತಿದೆ ಎಂದು ದೂರಿದರು.<br /> <br /> ಸಂಘಟನೆಯ ಮುಖಂಡರಾದ ಅಜರುದ್ದೀನ್, ರೋಹಿತ್ ಕರಂಬಳ್ಳಿ, ನಜೀರ್ ಕೋಟೇಶ್ವರ, ಕೆ. ಗೋಪಾಲಕೃಷ್ಣ, ದಿನೇಶ್ ಶೆಟ್ಟಿ ಎರ್ಮಾಳ್ ಉಪಸ್ಥಿತರಿದ್ದರು.<br /> <br /> <strong>ಪ್ರಮುಖ ಬೇಡಿಕೆಗಳು:</strong> ತುಳುನಾಡ ಎಲ್ಲ ಪ್ರದೇಶಗಳನ್ನು ಒಟ್ಟುಗೂಡಿಸಿ ತುಳುನಾಡು ಪ್ರತ್ಯೇಕ ರಾಜ್ಯ ರಚನೆ ಮಾಡಬೇಕು. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸಬೇಕು. ತುಳುನಾಡ ಜನರ ನಂಬಿಕೆ, ಆಚಾರ ವಿಚಾರಗಳಿಗೆ ಮಾರಕ ಆಗುವ ಮೂಢನಂಬಿಕೆ ನಿಷೇಧ ಕಾಯ್ದೆ ಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು.<br /> <br /> ಆಡಳಿತ ಹಾಗೂ ಎಲ್ಲ ವ್ಯವಹಾರಗಳನ್ನು ತುಳು ಭಾಷೆಯ ಲ್ಲಿಯೇ ನಡೆಸಲು ಕ್ರಮ ಕೈಗೊಳ್ಳಬೇಕು. ನೇತ್ರಾವದಿ ನದಿ ತಿರುವು ಯೋಜನೆ ಯನ್ನೂ ಈ ಕೂಡಲೇ ನಿಲ್ಲಿಸಬೇಕು. ತುಳುನಾಡಿನ ಪರಿಸರಕ್ಕೆ ಮಾರಕ ವಾಗುವ ಯಾವುದೇ ಕೈಗಾರಿಕೆಗಳನ್ನು ಆರಂಭಿಸಬಾರದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>