ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಭೇಟಿ ಮಾಡಿದ ನಟ ಅಮೀರ್‌

‘ಸತ್ಯಮೇವ ಜಯತೆ’ಯಲ್ಲಿ ಎತ್ತಿದ ಪಿಡುಗುಗಳ ಚರ್ಚೆ
Last Updated 23 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ/ಐಎಎನ್‌ಎಸ್‌): ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮ­ವಾರ ಬಾಲಿವುಡ್‌ ನಟ ಹಾಗೂ ನಿರ್ಮಾಪಕ ಅಮೀರ್‌ ಖಾನ್‌ ಅವರು ಭೇಟಿ ಮಾಡಿದರು.

ಭೇಟಿಯ ವೇಳೆ ಖಾನ್‌ ಅವರು,  ತಾವು ಟಿವಿಯಲ್ಲಿ ನಡೆಸಿಕೊಡುವ ‘ಸತ್ಯಮೇವ ಜಯತೆ’ ಕಾರ್ಯಕ್ರಮ­ದಲ್ಲಿ ಚರ್ಚಿಸಿದ ಸಾಮಾಜಿಕ ಪಿಡುಗು­ಗಳ ಕುರಿತು ಮಾತುಕತೆ ನಡೆಸಿದರು ಎನ್ನಲಾಗಿದೆ.

ಸಾಮಾಜಿಕ ಸಮಸ್ಯೆಗಳನ್ನು ಪರಿಹರಿ­ಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಈ ವೇಳೆ ಪ್ರಧಾನಿ ಭರವಸೆ ನೀಡಿದರು ಎಂದು ಅಮೀರ್‌ ಖಾನ್‌ ನಂತರ ತಿಳಿಸಿದರು.

ಸಾಮಾಜಿಕ ಸಮಸ್ಯೆಗಳ ಕುರಿತು ಬೆಳಕು ಚೆಲ್ಲಿದ ‘ಸತ್ಯಮೇವ ಜಯತೆ’ ಕಾರ್ಯಕ್ರಮದ ಮೂಲಕ ‘ಬದಲಾ­ವಣೆ­­ಗಾಗಿ ಮತ’ ಎಂಬ ನಮ್ಮ ಅಭಿಯಾ­ನಕ್ಕೆ ದೇಶದಾದ್ಯಂತ ಅಭೂತ­ಪೂರ್ವ ಸ್ಪಂದನೆ ವ್ಯಕ್ತವಾಗಿತ್ತು ಎಂಬುದನ್ನು ಪ್ರಧಾನಿ ಅವರ ಗಮನಕ್ಕೆ ತಂದಿರುವು­ದಾ­ಗಿಯೂ ಅಮೀರ್‌­ಖಾನ್‌ ಟ್ವೀಟ್‌ ಮಾಡಿದ್ದಾರೆ.

ಮೋದಿ ಹಾಗೂ ಖಾನ್‌ ಅವರ   ನಡುವಣ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಪ್ರಧಾನಿ ಕಚೇರಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT