ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಭಾಕರ ರೆಡ್ಡಿ ಅವರು ಸೋಮವಾರ ಆ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು.
ಪ್ರಭಾಕರ ರೆಡ್ಡಿ ಅವರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಸಹೋದರ, ಹಾಲಿ ಸಂಸದ ಡಿ.ಕೆ.ಸುರೇಶ್ ಅವರ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಶಿವಕುಮಾರ್ ಅವರ ಉಪಸ್ಥಿತಿಯಲ್ಲೇ ಜೆಡಿಎಸ್ಗೆ ವಿದಾಯ ಹೇಳಿ ಕಾಂಗ್ರೆಸ್ ಪ್ರವೇಶಿಸಿದರು.
‘ರಾಜಕೀಯದಲ್ಲಿ ಯಾವಾಗಲೂ ವಿರೋಧ ಪಕ್ಷ ಮತ್ತು ಪ್ರತಿಸ್ಪರ್ಧಿಗಳು ಇರುತ್ತಾರೆ. ನಮ್ಮ ಕ್ಷೇತ್ರಗಳಲ್ಲಿ ಉತ್ತಮ ಸ್ಪರ್ಧೆಗಾಗಿ ವಿರೋಧಿಗಳೂ ಬೇಕಾಗುತ್ತಾರೆ’ ಎಂದು ಸಚಿವರು ಹೇಳಿದರು.