ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ ವಾಪಸ್ ನೀಡಿದ ಅಕ್ಷತಾ ಕೆ. ಹುಂಚದಕಟೆı

Last Updated 18 ಅಕ್ಟೋಬರ್ 2015, 19:47 IST
ಅಕ್ಷರ ಗಾತ್ರ

ಶಿವಮೊಗ್ಗ: ಕವಯತ್ರಿ ಅಕ್ಷತಾ ಕೆ. ಹುಂಚದಕಟ್ಟೆ ಕರ್ನಾಟಕ ಸಾಹಿತ್ಯ ಅಕಾಡೆಮಿ ನೀಡಿದ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಅಕಾಡೆಮಿಗೆ ಹಿಂದಿರುಗಿಸಿದ್ದಾರೆ.

ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ, ಮತೀಯ ಕಾರಣಕ್ಕಾಗಿ ನಡೆದ ದಾದ್ರಿಯ ಘಟನೆ, ರೈತರ ಆತ್ಮಹತ್ಯೆ, ಉತ್ತರಪ್ರದೇಶದ ಗೌತಮಬುದ್ಧ ನಗರದಲ್ಲಿ ದಲಿತ ಕುಟುಂಬವನ್ನು ವಿವಸ್ತ್ರಗೊಳಿಸಿದ ಅಮಾನವೀಯತೆ ಸೇರಿದಂತೆ ದೇಶದಲ್ಲಿ ನಡೆಯುತ್ತಿರುವ ಅನೇಕ ಸಂವಿಧಾನ ವಿರೋಧಿ ಚಟುವಟಿಕೆಗಳನ್ನು ವಿರೋಧಿಸಿ ಪ್ರಶಸ್ತಿ ಹಿಂದಿರುಗಿಸಿದ್ದಾರೆ.

ರೈತ ಹೋರಾಟಗಾರ ಕಡಿದಾಳು ಶಾಮಣ್ಣ ಅವರ ಆತ್ಮಕಥನ ‘ಕಾಡ ತೊರೆಯ ಜಾಡು’ ಕೃತಿಯ ನಿರೂಪಣೆಗಾಗಿ 2011ರಲ್ಲಿ ಜೀವನ ಚರಿತ್ರೆ ವಿಭಾಗದಲ್ಲಿ ಅತ್ಯುತ್ತಮ ಕೃತಿ ಎಂದು ಗುರುತಿಸಿ ನೀಡಿದ್ದ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಅವರು ಹಿಂದಿರುಗಿಸಿರುವುದಾಗಿ ಭಾನುವಾರ ಅಕಾಡೆಮಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಯ ಮೊತ್ತ ₹5 ಸಾವಿರ ಪ್ರಶಸ್ತಿ ಫಲಕ, ನೆನಪಿನ ಕಾಣಿಕೆಯನ್ನು ವಾಪಸ್ ಮಾಡುವುದಾಗಿ ‘ಪ್ರಜಾವಾಣಿ’ಗೆ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT