ಮಂಗಳೂರು: ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಅವರ ಹತ್ಯೆ ನಂತರ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಸಂದೇಶ ಪ್ರಕಟಿಸಿದ ಆರೋಪದಡಿ ಭಜರಂಗ ದಳದ ಮುಖಂಡ ಪ್ರಸಾದ್ ಅತ್ತಾವರ್ನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನಲ್ಲಿ ನಡೆದ ಪಬ್ ಮೇಲಿನ ದಾಳಿಯ ಪ್ರಕರಣದ ಆರೋಪಿಯೂ ಆಗಿರುವ ಅತ್ತಾವರ್ನನ್ನು ಸದ್ಯ ಬಂದರು ಠಾಣೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಅತ್ತಾವರ್ ಕಲಬುರ್ಗಿ ಹತ್ಯೆ ಪ್ರಕರಣದ ಶಂಕಿತ ಆರೋಪಿ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಅದಾಗ್ಯೂ, ಈ ಸಂಬಂಧ ಪೊಲೀಸರು ಖಚಿತಪಡಿಸಿಲ್ಲ.