ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.1ರಿಂದ ಕನ್ನಡ ಸಾಹಿತ್ಯ ಸಮ್ಮೇಳನ

Last Updated 23 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಹಾಸನ: ಅಖಿಲ ಭಾರತ 81ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ. 1ರಿಂದ 3ರವರೆಗೆ ನಡೆಯಲಿದೆ.  ಸಮ್ಮೇಳನವನ್ನು ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಆಯೋಜಿಸಲು ಈ ಹಿಂದೆಯೇ ಸಾಹಿತ್ಯ ಪರಿಷತ್ತು ತೀರ್ಮಾನಿಸಿತ್ತು.

ಹಾಸನ ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣ­ದಲ್ಲಿ ಸಾಹಿತ್ಯ ಸಮ್ಮೇಳನ ಕುರಿತು ಭಾನುವಾರ ಆಯೋಜಿಸಿದ್ದ ಮೊದಲ ಸಮಾ­ಲೋ­ಚನಾ ಸಭೆಯಲ್ಲಿ ಶ್ರವಣ­ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸಮ್ಮೇಳನದ ದಿನಾಂಕವನ್ನು ಘೋಷಿಸಿದರು.

ಸಂಸದ ಎಚ್‌.ಡಿ. ದೇವೇಗೌಡ ಮಾತನಾಡಿ, ‘ಸಮ್ಮೇಳನಕ್ಕೆ ಕೆಲವೇ ದಿನಗಳು ಬಾಕಿ ಇರುವುದರಿಂದ ಸರ್ಕಾರವೂ ಹೆಚ್ಚಿನ ಸಹಕಾರ ನೀಡ­ಬೇಕು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೆಚ್ಚಿನ ಆಸಕ್ತಿ ವಹಿಸಿ ಉಪಸಮಿತಿ­ಗಳನ್ನು ರಚಿಸಲು ಮುಂದಾಗ­ಬೇಕು’ ಎಂದರು.

ಸಮ್ಮೇಳನದ ಲಾಂಛನ ತಯಾರಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿದ್ದವರು ಸಲಹೆ, ಸೂಚನೆ­ಗಳನ್ನು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT