ಚೆನ್ನೈ: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ದಕ್ಷಿಣ ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಹವಾಮಾನ ತಜ್ಞರ ಪ್ರಕಾರ ಮುಂದಿನ 48 ಗಂಟೆಗಳಲ್ಲಿ ಇನ್ನೂ ಹೆಚ್ಚಿನ ಮಳೆ ಬೀಳಲಿದೆ. ಈ ಮಧ್ಯೆ, ಮಳೆ ಸಂಬಂಧಿ ಘಟನೆಗಳಿಂದ ಸತ್ತವರ ಸಂಖ್ಯೆ10ಕ್ಕೆ ಏರಿದೆ.
ಗುರುವಾರ ಮದುರೆ ಜಿಲ್ಲೆಯ ತಿರುಮಂಗಳಂ ತಾಲ್ಲೂಕಿನಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋಗಿ, ನಂತರ ಅಗ್ನಿಶಾಮಕ ದಳ ಸಿಬ್ಬಂದಿ ಶವವನ್ನು ವಶಕ್ಕೆ ಪಡೆದಿದ್ದಾರೆ.