ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಬಂಡೀಪುರ ರಾಷ್ಟೀಯ ಉದ್ಯಾನವನದ ವ್ಯಾಪ್ತಿಯಲ್ಲಿನ ಹೆದ್ದಾರಿ 212 ಹಾಗೂ 67ರಲ್ಲಿ ರಾತ್ರಿ ಸಂಚಾರ ನಿಷೇಧವನ್ನು ತೆರವುಗೊಳಿಸುವಂತೆ ಹೈಕೋರ್ಟ್ಗೆ ಮನವಿ ಸಲ್ಲಿಸಬೇಕೆಂದು ನಿರ್ಧರಿಸಲಾಗಿದೆ.
ಪಟ್ಟಣದ ಖಾಸಗಿ ರೆಸಾರ್ಟ್ನಲ್ಲಿ ಈಚೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ರಾತ್ರಿ ಸಂಚಾರ ನಿಷೇಧ ತೆರವು ಬಗ್ಗೆ ನಡೆದ ಗಡಿ ರಾಜ್ಯ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಪ್ರಮುಖರು ಗಡಿ ಭಾಗದ ಅರಣ್ಯ ಪ್ರದೇಶ ವ್ಯಾಪ್ತಿಯೊಳಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅರಣ್ಯ ಇಲಾಖೆ ನ್ಯಾಯಾಲಯದ ಮೂಲಕ ನಿರ್ಭಂದ ಹೇರಲಾಗಿರುವ ಅದೇಶವನ್ನು ತೆರವುಗೊಳಿಸುವ ಕುರಿತಂತೆ ಹೈಕೋರ್ಟ್ ಗೆ ವರದಿ ಸಲ್ಲಿಸಲು ಕೇರಳ, ತಮಿಳುನಾಡು, ಕರ್ನಾಟಕ ರಾಜ್ಯದ ಪ್ರಮುಖರು ಹಾಗೂ ಜನಪ್ರತಿನಿಧಿಗಳು ಒಕ್ಕೊರಲ ತೀರ್ಮಾನ ಕೈಗೊಂಡರು.