ಹುಬ್ಬಳ್ಳಿ: ‘ಘಂಟಿಚೋರ ಸಮುದಾ ಯದ ವ್ಯಕ್ತಿಯೊಬ್ಬರ ಹತ್ಯೆಗೆ ಕಾರಣರಾಗಿ ತಲೆತಪ್ಪಿಸಿಕೊಂಡಿರುವ ದಿಂಗಾಲೇಶ್ವರ ಸ್ವಾಮೀಜಿಯನ್ನು ಕೂಡಲೇ ಬಂಧಿ ಸಬೇಕು’ಎಂದು ಬಾಲೇ ಹೊಸೂರು ದಲಿತ ದೌರ್ಜನ್ಯ ವಿರೋಧಿ ಒಕ್ಕೂಟದ ಸಂಚಾಲಕ ಬಸವರಾಜ ಸೂಳೀಭಾವಿ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಬಾಲೇಹೊಸೂರಿನ ದೌರ್ಜನ್ಯ ಪ್ರಕರ ಣವನ್ನು ಹಾಲಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ಸ್ವತಂತ್ರ ತನಿಖೆಗೆ ಸರ್ಕಾರ ಒಪ್ಪಿಸಲಿ ಎಂದು ಹೇಳಿದ ಅವರು, ಜಿಲ್ಲೆಯಲ್ಲಿ ದಲಿತರೊಬ್ಬರ ಹತ್ಯೆ ನಡೆ ದರೂ ಕುಟುಂಬ ದವರಿಗೆ ಸಾಂತ್ವನ ಹೇಳದ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ.ಪಾಟೀಲ ಅವರು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ದಿಂಗಾ ಲೇಶ್ವರ ನಡೆಸಿರುವ ಎಲ್ಲಾ ಅನ್ಯಾಯಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಜುಲೈ1 ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿದರು.