ಬೆಂಗಳೂರು (ಐಎಎನ್ಎಸ್): ಕರ್ನಾಟಕದಲ್ಲಿ ಹವಾ ನಿಯಂತ್ರಿತ (ಎಸಿ) ಖಾಸಗಿ ಬಸ್ಸೊಂದಕ್ಕೆ ಬುಧವಾರ ನಸುಕಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ ಕನಿಷ್ಠ 6 ಮಂದಿ ಪ್ರಯಾಣಿಕರು ಸಿಹಿ ನಿದ್ದೆಯಲ್ಲಿದ್ದಾಗಲೇ ಸಜೀವ ದಹನಗೊಂಡಿದ್ದು, ಹನ್ನೆರಡಕ್ಕೂ ಹೆಚ್ಚು ಮಂದಿ ಸುಟ್ಟಗಾಯಗಳಿಗೆ ಒಳಗಾಗಿದ್ದಾರೆ.
ರಾಜಧಾನಿಯಿಂದ ಸುಮಾರು 160 ಕಿ.ಮೀ. ದೂರದಲ್ಲಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಈ ದುರಂತ ಸಂಭವಿಸಿದೆ.