ಬೆಂಗಳೂರು: ಮೇಕೆದಾಟು ಯೋಜನೆಯನ್ನು ತಕ್ಷಣ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ‘ಕರ್ನಾಟಕ ಬಂದ್’ ಭಾಗಶಃ ಯಶಸ್ವಿಯಾಗಿದ್ದು, ಸಂಜೆಯ ವೇಳೆಗೆ ಬಸ್ಗಳ ಸಂಚಾರ ಆರಂಭಗೊಂಡಿದೆ.
ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿಯ ಕೆಲ ಮಾರ್ಗಗಳ ಬಸ್ ಸಂಚಾರ ಆರಂಭಗೊಂಡಿದೆ. ಸದ್ಯ ಬೆರಳೆಣಿಕೆಯಷ್ಟು ಬಸ್ಗಳು ರಸ್ತೆಗಿಳಿದಿವೆ.
‘ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ನಗರದ ವಿವಿಧ ಭಾಗಗಳಿಗೆ ಹಾಗೂ ನಗರದ ವಿವಿಧಡೆಯಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬಸ್ಗಳ ಸಂಚಾರ ಆರಂಭವಾಗಿದೆ’ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.