ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್‌ ಸಂಚಾರ ಆರಂಭ

Last Updated 18 ಏಪ್ರಿಲ್ 2015, 10:53 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಯೋಜನೆಯನ್ನು ತಕ್ಷಣ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ‘ಕರ್ನಾಟಕ ಬಂದ್‌’ ಭಾಗಶಃ ಯಶಸ್ವಿಯಾಗಿದ್ದು, ಸಂಜೆಯ ವೇಳೆಗೆ ಬಸ್‌ಗಳ ಸಂಚಾರ ಆರಂಭಗೊಂಡಿದೆ.

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿಯ ಕೆಲ ಮಾರ್ಗಗಳ ಬಸ್‌ ಸಂಚಾರ ಆರಂಭಗೊಂಡಿದೆ. ಸದ್ಯ ಬೆರಳೆಣಿಕೆಯಷ್ಟು ಬಸ್‌ಗಳು ರಸ್ತೆಗಿಳಿದಿವೆ.

‘ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಕೆಂಪೇಗೌಡ ಬಸ್‌ ನಿಲ್ದಾಣದಿಂದ ನಗರದ ವಿವಿಧ ಭಾಗಗಳಿಗೆ ಹಾಗೂ ನಗರದ ವಿವಿಧಡೆಯಿಂದ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಬಸ್‌ಗಳ ಸಂಚಾರ ಆರಂಭವಾಗಿದೆ’ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT