ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರಾಮುಲ್ಲಾ: ಎನ್‌ಕೌಂಟರ್‌ಗೆ ಯೋಧ ಬಲಿ

Last Updated 2 ಸೆಪ್ಟೆಂಬರ್ 2015, 8:40 IST
ಅಕ್ಷರ ಗಾತ್ರ

 ಶ್ರೀನಗರ (ಪಿಟಿಐ): ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಬುಧವಾರ ಗುಂಡಿನ ಕಾಳಗ ನಡೆಯುತ್ತಿದ್ದು, ‘ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲೆಯ ರಫಿಯಾಬಾದ್‌ಕ್ಕೆ ಸೇರಿದ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿಕೊಂಡ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬುಧವಾರ ಬೆಳಿಗ್ಗೆ 7 ಗಂಟೆಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ ಭದ್ರತಾ ಸಿಬ್ಬಂದಿ ಎನ್‌ಕೌಂಟರ್ ಆರಂಭಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಲ್ಲದೇ, ಗುಪ್ತಚರ ವರದಿಗಳ ಪ್ರಕಾರ, ಉಭಯ ಉಗ್ರರೂ ಲಷ್ಕರ್ ಎ– ತಯಬಾ ಸಂಘಟನೆಗೆ ಸೇರಿದವರು ಎಂದೂ ಆ ಅಧಿಕಾರಿ ಹೇಳಿದ್ದಾರೆ. ಇಬ್ಬರ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT