ಸ್ಥಳೀಯರು ಕೆರೆಯ ಪಕ್ಕದಲ್ಲೇ ಇರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸುವಂತೆ ಹೇಳಿದ್ದಾರೆ. ಆದರೆ, ಅದಕ್ಕೆ ಒಪ್ಪದ ಕುಟುಂಬ ಸದಸ್ಯರು ಠಾಣೆಗೆ ಮಾಹಿತಿ ನೀಡಿದರು. ಬಳಿಕ ಸ್ಥಳಕ್ಕೆ ತೆರಳಿ ಪರಸ್ಪರರ ನಡುವೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದೆವು. ನಂತರ ಶ್ವೇತಾ ಪೋಷಕರು ತಮ್ಮ ಹುಟ್ಟೂರಾದ ತಮಿಳುನಾಡಿನ ಕೃಷ್ಣಗಿರಿಗೆ ಶವ ಕೊಂಡೊಯ್ದರು ಎಂದು ಪೊಲೀಸರು ಹೇಳಿದ್ದಾರೆ.
ಶ್ವೇತಾ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನಡೆಸಲು ಹೋಗಿದ್ದ ಜಾಗವನ್ನು ಕೆಲ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಹೀಗಾಗಿ ಅವರ ಬೆಂಬಲಿಗರು ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.