ಬೆಂಗಳೂರು: ಎಸ್.ಜಿ.ಬಾಳೇಕುಂದ್ರಿ ವೃತ್ತದಲ್ಲಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಬುಧವಾರ ಮಧ್ಯಾಹ್ನ 2.30 ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯಿಂದ ಆಕ್ರೋಶಗೊಂಡ ಸಾರ್ವಜನಿಕರು, ಬಸ್ ಚಾಲಕ ಬಸವಲಿಂಗಗೌಡನನ್ನು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಘಟನೆಯಲ್ಲಿ ಸ್ಕೂಟರ್ ಮೇಲಿದ್ದ ವೈದ್ಯೆ ರಜನಿ ಅವರು ಗಾಯಗೊಂಡಿದ್ದಾರೆ. ಅವರನ್ನು ಇಸ್ರೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ’ ಎಂದು ಅವರು ಹೇಳಿದರು.
‘ಘಟನೆ ಸಂಬಂಧ ಚಾಲಕನನ್ನು ಬಂಧಿಸಲಾಗಿದ್ದು, ಬಸ್ ಅನ್ನು ಜಪ್ತಿ ಮಾಡಲಾಗಿದೆ. ಅಪಘಾತಕ್ಕೆ ಬ್ರೇಕ್ ವೈಫಲ್ಯ ಕಾರಣ ಎಂದು ಚಾಲಕ ಹೇಳಿದ್ದಾನೆ. ಆದರೆ, ಬಿಎಂಟಿಸಿ ಎಂಜಿನಿಯರ್ಗಳು ಹಾಗೂ ಆರ್ಟಿಒ ಅಧಿಕಾರಿಗಳು ಬಂದ ಬಳಿಕವಷ್ಟೇ ಸತ್ಯ ತಿಳಿಯಲಿದೆ’ ಎಂದು ಪೊಲೀಸರು ವಿವರಿಸಿದರು.