ಠಾಣೆ, ಮಹಾರಾಷ್ಟ್ರ (ಪಿಟಿಐ): ಮುಂದಿನ ತಿಂಗಳು ಮಹಾರಾಷ್ಟ್ರ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಕಾಂಗ್ರೆಸ್ ಹಾಗೂ ಎನ್ಸಿಪಿ ಮತ್ತು ಅವರ ಕೆಟ್ಟ ಆಡಳಿತದ ವಿರುದ್ಧ ಬಿಜೆಪಿಯ ಹೋರಾಟ ಎಂದಿದ್ದಾರೆ.