ಶಿವಸೇನೆ ಹಿರಿಯ ಮುಖಂಡ ಸುಭಾಷ್ ದೇಸಾಯಿ, ಪಕ್ಷದ ವಕ್ತಾರ ಸಂಜಯ್ ರಾವತ್ ಮಂಗಳವಾರ ಇಲ್ಲಿನ ಬಿಜೆಪಿ ಕಚೇರಿ ವಸಂತ ಸ್ಮೃತಿ ಭವನಕ್ಕೆ ಮಾತುಕತೆಗಾಗಿ ಆಗಮಿಸಿದರು. ಬಿಜೆಪಿಯ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಓಂ ಮಾಥುರ್ ಕೂಡ ಈ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ 15ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ, ಶಿವಸೇನೆ, ಕಾಂಗ್ರೆಸ್, ಎನ್ಸಿಪಿ ನಡುವೆ ತೆರೆಮರೆಯಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ.
ಬಿಜೆಪಿ 130 ಸ್ಥಾನಗಳನ್ನು ತನಗೆ ಬಿಟ್ಟುಕೊಡುವಂತೆ ಶಿವಸೇನೆಗೆ ಹೊಸ ಪ್ರಸ್ತಾವನೆ ಕಳುಹಿಸಿದೆ. ಆದರೆ, ಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಬಿಜೆಪಿಗೆ 119 ಸ್ಥಾನಗಳನ್ನು ಬಿಟ್ಟುಕೊಡುವುದಾಗಿ ಉಳಿದ 151 ಸ್ಥಾನಗಳಲ್ಲಿ ಸೇನೆ ಸ್ಪರ್ಧಿಸುವುದಾಗಿ ಪಟ್ಟು ಹಿಡಿದಿದ್ದಾರೆ.