ಪಟ್ನಾ: ಬಿಜೆಪಿಯ ಹಿರಿಯ ಮುಖಂಡ ಮತ್ತು ಬಿಹಾರ ಘಟಕದ ಉಪಾಧ್ಯಕ್ಷ ವಿಶ್ವೇಶ್ವರ ಓಜಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.
ಆರ ಎಂಬ ಪ್ರದೇಶದಲ್ಲಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ಓಜಾ ಅವರ ಮೇಲೆ 15 ಗುಂಡುಗಳನ್ನು ಹಾರಿಸಿದ್ದಾರೆ. ಓಜಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಿರಿಯ ಅಧಿಕಾರಿಗಳ ಜತೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿಯ ಪರಿಶೀಲನೆ ನಡೆಸುತ್ತಿದ್ದಾಗಲೇ ಈ ಘಟನೆ ನಡೆದಿದೆ.