<p><strong>ಶಿರಸಿ (ಉತ್ತರ ಕನ್ನಡ): </strong>ಹಿರಿಯ ಕವಿ ಕಯ್ಯಾರ ಕಿಞಣ್ಣ ರೈ ಅವರಿಗೆ ಬೆಂಗಳೂರಿನಲ್ಲಿ ಪಂಪ ಪ್ರಶಸ್ತಿ ಪ್ರದಾನ ಮಾಡುವ ಸರ್ಕಾರದ ನಿಲುವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.<br /> <br /> ಕನ್ನಡ ಸಾಹಿತ್ಯ ಪರಿಷತ್ತಿನ ಬನವಾಸಿ ಘಟಕ, ಕದಂಬ ಕನ್ನಡ ಸಂಘ, ಬನವಾಸಿ ವಲಯ ಅಭ್ಯುದಯ ಸಮಿತಿ ಸರ್ಕಾರದ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿವೆ.<br /> <br /> 1996ರಿಂದಲೂ ಈ ಪ್ರಶಸ್ತಿಯನ್ನು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತಿದೆ. 17 ವರ್ಷಗಳಲ್ಲಿ ನಾನಾ ಕಾರಣಕ್ಕಾಗಿ ಐವರು ಸಾಹಿತಿಗಳನ್ನು ಹೊರತುಪಡಿಸಿದರೆ ಉಳಿದವರು ಬನವಾಸಿಯಲ್ಲಿಯೇ ಪ್ರಶಸ್ತಿ ಸ್ವೀಕರಿಸಿದ್ದಾರೆ.<br /> <br /> 2 ವರ್ಷಗಳಿಂದ ನಿಂತುಹೋಗಿದ್ದ ಕದಂಬೋತ್ಸವವನ್ನು ರಾಜ್ಯ ಸರ್ಕಾರ ಈ ವರ್ಷ ಜನವರಿಯಲ್ಲಿ ನಡೆಸಿತು. 2012 ಹಾಗೂ 2013ನೇ ಸಾಲಿನ ಪಂಪ ಪ್ರಶಸ್ತಿಯನ್ನು ಇದೇ ಕಾರ್ಯಕ್ರಮದಲ್ಲಿ ಪ್ರದಾನ ಮಾಡುವುದಾಗಿ ಹೇಳಿದ್ದ ಸರ್ಕಾರ, ಕೊನೆಯ ಕ್ಷಣದಲ್ಲಿ 2012ನೇ ಸಾಲಿನ ಪ್ರಶಸ್ತಿಯನ್ನು ಮಾತ್ರ ಘೋಷಿಸಿತು.<br /> <br /> ಪ್ರಶಸ್ತಿಗೆ ಭಾಜನರಾದ ವಿದ್ವಾಂಸ ಡಿ.ಎನ್. ಶಂಕರ ಭಟ್ಟ ಪ್ರಶಸ್ತಿ ಸ್ವೀಕರಿಸಲು ಬನವಾಸಿಗೆ ಬಾರದ ಕಾರಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ನೇತೃತ್ವದಲ್ಲಿ ಇಲಾಖೆ ಅಧಿಕಾರಿಗಳು ಅವರ ಮನೆಗೆ ತೆರಳಿ ಪ್ರಶಸ್ತಿ ನೀಡಿ ಗೌರವಿಸಿದ್ದರು.<br /> ‘ಪ್ರಸ್ತುತ ಘೋಷಿಸಿರುವ ಪ್ರಶಸ್ತಿಯನ್ನು ಇದೇ 23ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲು ಸಿದ್ಧತೆ ನಡೆದಿದೆ.</p>.<p>ಕದಂಬೋತ್ಸವಕ್ಕೆ ಶಂಕರ ಭಟ್ಟ ಅವರನ್ನು ಕರೆತರಲು ವಿಫಲವಾದ ಸರ್ಕಾರ ಈಗ ಬನವಾಸಿಯನ್ನು ಕಡೆಗಣಿಸಿ ಪ್ರಶಸ್ತಿ ಪ್ರದಾನವನ್ನು ಬೆಂಗಳೂರಿಗೇ ವರ್ಗಾಯಿಸುವ ಯತ್ನ ನಡೆಸಿದೆ’ ಎಂದು ಬನವಾಸಿ ಮಧುಕೇಶ್ವರ ದೇವಾಲಯದ ಅಧ್ಯಕ್ಷ ಟಿ.ಜಿ.ನಾಡಿಗೇರ ಟೀಕಿಸಿದರು.<br /> ‘ಸಾಹಿತಿಗಳು ಇದ್ದಲ್ಲಿಗೇ ತೆರಳಿ ಪ್ರಶಸ್ತಿ ನೀಡುವ ದಯನೀಯ ಸ್ಥಿತಿ ಸರ್ಕಾರಕ್ಕೆ ಬರಬಾರದು.</p>.<p>ಪ್ರಶಸ್ತಿ ಸ್ವೀಕರಿಸುವವರು ಸಹ ಬನವಾಸಿಯ ಪವಿತ್ರ ಮಣ್ಣಿನಲ್ಲಿಯೇ ಸ್ವೀಕರಿಸಬೇಕು. ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುವುದನ್ನು ಪ್ರಜ್ಞಾವಂತರು ವಿರೋಧಿಸಬೇಕು. ಸರ್ಕಾರದ ನಿಲುವು ಪಂಪನ ಅಭಿಮಾನಿಗಳಿಗೆ ನೋವು ತಂದಿದೆ’ ಎಂದು ಅವರು ವಿಷಾದಿಸಿದರು.<br /> ‘ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುವುದಾದರೆ ಸರ್ಕಾರದ ಪ್ರತಿಷ್ಠಿತ ಕದಂಬೋತ್ಸವ ಅರ್ಥ ಕಳೆದುಕೊಳ್ಳುತ್ತದೆ.<br /> <br /> ಬನವಾಸಿಯಲ್ಲಿ ಪ್ರಶಸ್ತಿ ಪ್ರದಾನ ಮಾಡುವಂತೆ ಒತ್ತಡ ಸೃಷ್ಟಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು ವಿಫಲರಾದಂತೆ ಕಾಣುತ್ತದೆ’ ಎಂದು ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ ಸದಸ್ಯೆ ಪ್ರೊ. ವಿಜಯನಳಿನಿ ರಮೇಶ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ (ಉತ್ತರ ಕನ್ನಡ): </strong>ಹಿರಿಯ ಕವಿ ಕಯ್ಯಾರ ಕಿಞಣ್ಣ ರೈ ಅವರಿಗೆ ಬೆಂಗಳೂರಿನಲ್ಲಿ ಪಂಪ ಪ್ರಶಸ್ತಿ ಪ್ರದಾನ ಮಾಡುವ ಸರ್ಕಾರದ ನಿಲುವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.<br /> <br /> ಕನ್ನಡ ಸಾಹಿತ್ಯ ಪರಿಷತ್ತಿನ ಬನವಾಸಿ ಘಟಕ, ಕದಂಬ ಕನ್ನಡ ಸಂಘ, ಬನವಾಸಿ ವಲಯ ಅಭ್ಯುದಯ ಸಮಿತಿ ಸರ್ಕಾರದ ನಿಲುವಿಗೆ ಆಕ್ಷೇಪ ವ್ಯಕ್ತಪಡಿಸಿವೆ.<br /> <br /> 1996ರಿಂದಲೂ ಈ ಪ್ರಶಸ್ತಿಯನ್ನು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತಿದೆ. 17 ವರ್ಷಗಳಲ್ಲಿ ನಾನಾ ಕಾರಣಕ್ಕಾಗಿ ಐವರು ಸಾಹಿತಿಗಳನ್ನು ಹೊರತುಪಡಿಸಿದರೆ ಉಳಿದವರು ಬನವಾಸಿಯಲ್ಲಿಯೇ ಪ್ರಶಸ್ತಿ ಸ್ವೀಕರಿಸಿದ್ದಾರೆ.<br /> <br /> 2 ವರ್ಷಗಳಿಂದ ನಿಂತುಹೋಗಿದ್ದ ಕದಂಬೋತ್ಸವವನ್ನು ರಾಜ್ಯ ಸರ್ಕಾರ ಈ ವರ್ಷ ಜನವರಿಯಲ್ಲಿ ನಡೆಸಿತು. 2012 ಹಾಗೂ 2013ನೇ ಸಾಲಿನ ಪಂಪ ಪ್ರಶಸ್ತಿಯನ್ನು ಇದೇ ಕಾರ್ಯಕ್ರಮದಲ್ಲಿ ಪ್ರದಾನ ಮಾಡುವುದಾಗಿ ಹೇಳಿದ್ದ ಸರ್ಕಾರ, ಕೊನೆಯ ಕ್ಷಣದಲ್ಲಿ 2012ನೇ ಸಾಲಿನ ಪ್ರಶಸ್ತಿಯನ್ನು ಮಾತ್ರ ಘೋಷಿಸಿತು.<br /> <br /> ಪ್ರಶಸ್ತಿಗೆ ಭಾಜನರಾದ ವಿದ್ವಾಂಸ ಡಿ.ಎನ್. ಶಂಕರ ಭಟ್ಟ ಪ್ರಶಸ್ತಿ ಸ್ವೀಕರಿಸಲು ಬನವಾಸಿಗೆ ಬಾರದ ಕಾರಣ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ನೇತೃತ್ವದಲ್ಲಿ ಇಲಾಖೆ ಅಧಿಕಾರಿಗಳು ಅವರ ಮನೆಗೆ ತೆರಳಿ ಪ್ರಶಸ್ತಿ ನೀಡಿ ಗೌರವಿಸಿದ್ದರು.<br /> ‘ಪ್ರಸ್ತುತ ಘೋಷಿಸಿರುವ ಪ್ರಶಸ್ತಿಯನ್ನು ಇದೇ 23ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲು ಸಿದ್ಧತೆ ನಡೆದಿದೆ.</p>.<p>ಕದಂಬೋತ್ಸವಕ್ಕೆ ಶಂಕರ ಭಟ್ಟ ಅವರನ್ನು ಕರೆತರಲು ವಿಫಲವಾದ ಸರ್ಕಾರ ಈಗ ಬನವಾಸಿಯನ್ನು ಕಡೆಗಣಿಸಿ ಪ್ರಶಸ್ತಿ ಪ್ರದಾನವನ್ನು ಬೆಂಗಳೂರಿಗೇ ವರ್ಗಾಯಿಸುವ ಯತ್ನ ನಡೆಸಿದೆ’ ಎಂದು ಬನವಾಸಿ ಮಧುಕೇಶ್ವರ ದೇವಾಲಯದ ಅಧ್ಯಕ್ಷ ಟಿ.ಜಿ.ನಾಡಿಗೇರ ಟೀಕಿಸಿದರು.<br /> ‘ಸಾಹಿತಿಗಳು ಇದ್ದಲ್ಲಿಗೇ ತೆರಳಿ ಪ್ರಶಸ್ತಿ ನೀಡುವ ದಯನೀಯ ಸ್ಥಿತಿ ಸರ್ಕಾರಕ್ಕೆ ಬರಬಾರದು.</p>.<p>ಪ್ರಶಸ್ತಿ ಸ್ವೀಕರಿಸುವವರು ಸಹ ಬನವಾಸಿಯ ಪವಿತ್ರ ಮಣ್ಣಿನಲ್ಲಿಯೇ ಸ್ವೀಕರಿಸಬೇಕು. ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುವುದನ್ನು ಪ್ರಜ್ಞಾವಂತರು ವಿರೋಧಿಸಬೇಕು. ಸರ್ಕಾರದ ನಿಲುವು ಪಂಪನ ಅಭಿಮಾನಿಗಳಿಗೆ ನೋವು ತಂದಿದೆ’ ಎಂದು ಅವರು ವಿಷಾದಿಸಿದರು.<br /> ‘ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುವುದಾದರೆ ಸರ್ಕಾರದ ಪ್ರತಿಷ್ಠಿತ ಕದಂಬೋತ್ಸವ ಅರ್ಥ ಕಳೆದುಕೊಳ್ಳುತ್ತದೆ.<br /> <br /> ಬನವಾಸಿಯಲ್ಲಿ ಪ್ರಶಸ್ತಿ ಪ್ರದಾನ ಮಾಡುವಂತೆ ಒತ್ತಡ ಸೃಷ್ಟಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು ವಿಫಲರಾದಂತೆ ಕಾಣುತ್ತದೆ’ ಎಂದು ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ ಸದಸ್ಯೆ ಪ್ರೊ. ವಿಜಯನಳಿನಿ ರಮೇಶ ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>