ಮತ್ತು ಎಂ.ಮುತ್ತುರಾಯ ಅವರನ್ನು ಬೇರೆ ಜಿಲ್ಲೆಗಳಿಗೆ ಹಾಗೂ ಇತರ ಮೂವರು ಡಿ.ಸಿ.ಪಿಗಳನ್ನು ನಗರದ ಬೇರೆ ವಿಭಾಗಗಳಿಗೆ ವರ್ಗ ಮಾಡಲಾಗಿದೆ.
ಅನೇಕ ರಾಜಕಾರಣಿಗಳು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಿದ್ದ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಮುಖ್ಯಸ್ಥ ಆರ್.ಪಿ. ಶರ್ಮಾ ಅವರನ್ನೂ ವರ್ಗಾಯಿಸಲಾಗಿದೆ.
ಐಎಎಸ್ ಅಧಿಕಾರಿಗಳು: ಜಿ.ಲತಾ ಕೃಷ್ಣರಾವ್– ಅಭಿವೃದ್ಧಿ ಆಯುಕ್ತರು. ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಪಿ.ಮಣಿವಣ್ಣನ್– ವ್ಯವಸ್ಥಾಪಕ ನಿರ್ದೇಶಕ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ. ಡಾ.ರಾಮೇಗೌಡ– ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು. ಎಸ್.ಜಿಯಾವುಲ್ಲಾ– ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ. ಐಪಿಎಸ್ ಅಧಿಕಾರಿಗಳು: ಪ್ರವೀಣ್ ಸೂದ್– ಪ್ರಧಾನ ಕಾರ್ಯದರ್ಶಿ, ಗೃಹ ಇಲಾಖೆ. ಆರ್.ಪಿ. ಶರ್ಮ–ಎಡಿಜಿಪಿ, ರೈಲ್ವೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಡಿಜಿಪಿ ಟಿ.ಸುನಿಲ್ ಕುಮಾರ್ ಅವರಿಗೆ ಬಿಎಂಟಿಎಫ್ನ ಹೆಚ್ಚುವರಿ ಹೊಣೆ ವಹಿಸಲಾಗಿದೆ.