ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ₹ 2015–16ನೇ ಸಾಲಿನ ಶೈಕ್ಷಣಿಕ ವರ್ಷದ ₹ 42 ಕೋಟಿ ಕೊರತೆಯ ಬಜೆಟ್ಗೆ ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ಶುಕ್ರವಾರ ಅನುಮೋದನೆ ನೀಡಲಾಯಿತು.
ಸುವರ್ಣ ಮಹೋತ್ಸವ ಭವನ ನಿರ್ಮಿಸುವುದು, ವಾಣಿಜ್ಯ ಕಟ್ಟಡದ ಕಾಮಗಾರಿ, ಪರೀಕ್ಷಾ ಭವನ ವರ್ಗಾವಣೆ, ಒಬಿಸಿ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ನೀಡಲು ಬಜೆಟ್ನಲ್ಲಿ ಅನುದಾನ ಇಡಲಾಗಿದೆ.
ಬೆಂಗಳೂರು ವಿವಿಯಲ್ಲಿ ಸೆಂಟ್ರಲ್ ಕಾಲೇಜು ಕ್ಯಾಂಪಸ್ ಉಳಿಸಿಕೊಳ್ಳಲು ಒತ್ತಡ ಹೇರಬೇಕು. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕುಲಪತಿ ಪ್ರೊ. ಬಿ.ತಿಮ್ಮೇಗೌಡ ಭೇಟಿ ಮಾಡಿ ಮನವಿ ಮಾಡಬೇಕು ಎಂದು ಹಲವು ಸದಸ್ಯರು ಒತ್ತಾಯಿಸಿದರು.
‘ವಿವಿ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ಕಾರ ವಿಭಜನೆಯ ನಿರ್ಧಾರ ತೆಗೆದುಕೊಂಡಿದೆ ’ ಎಂದು ತಿಮ್ಮೇಗೌಡ ಅಸಮಾಧಾನ ವ್ಯಕ್ತಪಡಿಸಿದರು.