ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ ಡಿಕ್ಕಿ: ಯುವ ವಕೀಲ ದುರ್ಮರಣ

Last Updated 15 ಏಪ್ರಿಲ್ 2014, 20:37 IST
ಅಕ್ಷರ ಗಾತ್ರ

ಬೆಂಗಳೂರು: ವರ್ತೂರು ಮುಖ್ಯರಸ್ತೆಯ ಕುಂದಲಹಳ್ಳಿ ಜಂಕ್ಷನ್‌ ಬಳಿ ಮಂಗಳವಾರ ಮಧ್ಯಾಹ್ನ ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಹೇಮಂತ್‌ ಪದ್ಮನಾಭ (30) ಎಂಬ ವಕೀಲರು ಸಾವನ್ನಪ್ಪಿದ್ದಾರೆ.

ಮೂಲತಃ ಶಿವಮೊಗ್ಗದ ಹೇಮಂತ್‌ ಅವರು ಕುಟುಂಬ ಸದಸ್ಯರೊಂದಿಗೆ ತುಮಕೂರಿನಲ್ಲಿ ನೆಲೆಸಿದ್ದರು.

ನಗರದ ನ್ಯಾಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಅವರು ಪ್ರತಿನಿತ್ಯ ರೈಲಿನಲ್ಲಿ ತುಮಕೂರಿನಿಂದ ನಗರಕ್ಕೆ ಬಂದು ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವೈಯಕ್ತಿಕ ಕೆಲಸದ ನಿಮಿತ್ತ ಸ್ನೇಹಿತನ ಬೈಕ್‌ನಲ್ಲಿ ವರ್ತೂರಿಗೆ ಬಂದಿದ್ದ ಅವರು ವಾಪಸ್‌ ಹೋಗುತ್ತಿದ್ದಾಗ ಮತ್ತೊಂದು ಬೈಕ್‌ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ನಂತರ ಬೈಕ್‌ ಸವಾರ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ವೈಟ್‌ಫೀಲ್ಡ್‌ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT