ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ ಸವಾರನ ಸಾವಿಗೆ ಆಕ್ರೋಶ ಲಾರಿಗಳಿಗೆ ಬೆಂಕಿ

Last Updated 13 ಫೆಬ್ರುವರಿ 2016, 20:20 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ಸಂಚಾರ ಠಾಣೆ ಬಳಿ ನಿಲ್ಲಿಸಿದ್ದ ಬೈಕ್ ಸವಾರನ ಸಾವಿಗೆ ಕಾರಣವಾದ ಟಿಪ್ಪರ್ ಲಾರಿಗೆ, ಶನಿವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಎರಡು ಲಾರಿಗಳು ಹೊತ್ತಿ ಉರಿದಿವೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದರು.

ಕೋಗಿಲು ಕ್ರಾಸ್ ಬಳಿ ಮಧ್ಯಾಹ್ನ 3ರ ಸುಮಾರಿಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ರಾಮು (30) ಎಂಬುವರು ಮೃತಪಟ್ಟಿದ್ದರು. ನಂತರ ಸ್ಥಳಕ್ಕೆ ಹೋಗಿದ್ದ ಪೊಲೀಸರು, ಉದ್ರಿಕ್ತ ಜನರನ್ನು ಚದುರಿಸಿ ಲಾರಿಯನ್ನು ಠಾಣೆಗೆ ತಂದು ನಿಲ್ಲಿಸಿದ್ದರು.

ಆದರೆ ರಾತ್ರಿ 11.30ರ ಸುಮಾರಿಗೆ ಠಾಣೆ ಹೊರಗೆ ನಿಲ್ಲಿಸಿದ್ದ ಲಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಯಿಂದಾಗಿ ಪಕ್ಕದಲ್ಲಿದ್ದ ಮತ್ತೊಂದು ಲಾರಿ ಕೂಡ ಸುಟ್ಟು ಹೋಗಿದೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT