ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದಕ ಕೃತ್ಯಕ್ಕೆ ಭಾರತದ ಕುಮ್ಮಕ್ಕು

ಪಾಕಿಸ್ತಾನ ರಕ್ಷಣಾ ಸಚಿವರ ಆಪಾದನೆ
Last Updated 27 ಮೇ 2015, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಭಾರತದ ಗುಪ್ತಚರ ಇಲಾಖೆಯು ಭಯೋತ್ಪಾದಕರ ಜತೆ ಸೇರಿಕೊಂಡು ತಮ್ಮ ದೇಶದಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮುಹಮ್ಮದ್ ಅಸೀಫ್ ಅವರು ಆಪಾದಿಸಿದ್ದಾರೆ.

ಭಯೋತ್ಫಾದಕರನ್ನು ಭಯೋತ್ಪಾದಕರಿಂದಲೇ ಮಟ್ಟ ಹಾಕಬೇಕು ಎಂದು ಭಾರತದ ರಕ್ಷಣಾ ಸಚಿವ ಮನೋಹರ ಪರಿಕ್ಕರ್ ಹೇಳಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನದ ರಕ್ಷಣಾ ಸಚಿವರು ಈ ಆಪಾದನೆ ಮಾಡಿದ್ದು, ಅವರ ಹೇಳಿಕೆಯನ್ನು ಪಾಕಿಸ್ತಾನದ ಆಕಾಶವಾಣಿ ಪ್ರಸಾರ ಮಾಡಿದೆ.

ಖಂಡನೆ: ಪರಿಕ್ಕರ್‌ ಹೇಳಿಕೆ ಖಂಡಿಸಿ ಪಾಕಿಸ್ತಾನದ ಸಂಸದೀಯ ಸಮಿತಿ ಬುಧವಾರ ನಿರ್ಣಯ ಕೈಗೊಂಡಿದೆ.
ಈ ವಿಷಯವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ  ಪ್ರಸ್ತಾಪಿಸುವಂತೆ ಸಮಿತಿಯು ಸರ್ಕಾರಕ್ಕೆ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT