ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಗೆ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ಜಯಲಲಿತಾ ಕರ್ನಾಟಕ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯ ವಿರುದ್ಧ ವಾದ ಮಂಡಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಪಿಪಿ) ಭವಾನಿ ಸಿಂಗ್ ಅವರಿಗೆ ಅರ್ಹತೆ ಇದೆಯೇ? ಇಲ್ಲವೇ? ಎಂಬ ಬಗ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸೋಮವಾರ ಸುಪ್ರೀಂಕೋರ್ಟ್ನಲ್ಲಿ ನಡೆಯಿತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಈ ನೇಮಕ ಕಾನೂನಾತ್ಮಕವಾಗಿ ತಪ್ಪು ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.
ಜಯಲಲಿತಾ ಮೇಲ್ಮನವಿ ಅರ್ಜಿಯ ವಿರುದ್ಧ ವಾದ ಮಂಡಿಸಲು ಭವಾನಿ ಸಿಂಗ್ ಅವರಿಗೆ ಅಧಿಕಾರವಿಲ್ಲ ಎಂದು ಡಿಎಂಕೆಯ ಅನ್ಬಳಗನ್ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ ಹೈಕೋರ್ಟ್ನಲ್ಲಿ ಈ ಕುರಿತು ಲಿಖಿತ ಆಕ್ಷೇಪಣೆ ಸಲ್ಲಿಸಲು ಅನ್ಬಳಗನ್ ಮತ್ತು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಅವಕಾಶ ನೀಡಿದೆ.