ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಗವತ ನಾರಾಯಣ ನೆಬ್ಬೂರರಿಗೆ ಕಾರ್ಕಡ ಉಡುಪ ಪ್ರಶಸ್ತಿ

Last Updated 26 ಡಿಸೆಂಬರ್ 2014, 5:48 IST
ಅಕ್ಷರ ಗಾತ್ರ

ಬ್ರಹ್ಮಾವರ: ಮೊತ್ತ ಮೊದಲು ವಿದೇಶಕ್ಕೆ ಯಕ್ಷಗಾನವನ್ನು ಕೊಂಡೊಯ್ದ, ಯಕ್ಷ ಸೀಮೋಲ್ಲಂಘನದ ದಾಖಲೆಯ, ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕರಲ್ಲೊಬ್ಬರಾದ ಕಾರ್ಕಡ ಶ್ರೀನಿವಾಸ ಉಡುಪ ನೆನಪಿನ ಪ್ರಸಕ್ತ ಸಾಲಿನ ಪ್ರಶಸ್ತಿಗೆ ಉತ್ತರ ಕನ್ನಡದ ಹಿರಿಯ ಭಾಗವತ ನೆಬ್ಬೂರು ನಾರಾಯಣ ಆಯ್ಕೆಯಾಗಿದ್ದಾರೆ.

ನೆಬ್ಬೂರರು ಸುಮಾರು ನಾಲ್ಕು ದಶಕಗಳ ಕಾಲ ತಮ್ಮ ಶ್ರೀಮಂತ ಕಂಠದಿಂದ ಯಕ್ಷಗಾನದ ಕಲಾ ವ್ಯವಸಾಯದಲ್ಲಿ ಭಾಗವತರಾಗಿ ಪ್ರಸಿದ್ಧರಾದವರು. ಕೋಟ ಅಮೃತೇಶ್ವರಿ ಮೇಳ, ಇಡುಗುಂಜಿಯ ಕೆರೆಮನೆ ಮೇಳಗಳಲ್ಲಿ ಮೂರು ತಲೆಮಾರಿನ ಕಲಾವಿದರನ್ನು ಕುಣಿಸಿ, ಮೆರೆಸಿದ್ದಾರೆ.

ದೇಶ, ವಿದೇಶಗಳಲ್ಲಿಯೂ ನೆಬ್ಬೂರರ ಸ್ವರಮಾಧುರ್ಯ ಕಲಾಸಹೃದಯರ ಕಿವಿಗಳಲ್ಲಿ ಅನುರಣಿಸಿದೆ. ಕಲಾರಂಗದಲ್ಲಿ ಮಾತ್ರವಲ್ಲದೆ, ನಿತ್ಯ ಜೀವನದಲ್ಲೂ ಶಿಸ್ತು ಸಂಯಮದಿಂದ ಬಾಳಿ, ಅಪಾರ ಕಲಾರಾಧಕರ ಪ್ರೀತಿ-ಗೌರವಕ್ಕೆ ಪಾತ್ರರಾದ ನೆಬ್ಬೂರರನ್ನು, ತಿರುಗಾಟದ ನಲ್ವತ್ತರ ಸಂಭ್ರಮವನ್ನು ಆಚರಿಸುತ್ತಿರುವ ಸಾಲಿಗ್ರಾಮ ಮಕ್ಕಳ ಮೇಳವು ಮುಂದಿನ ಜನವರಿಯಲ್ಲಿ ಕೋಟದ ಪಟೇಲರ ಮನೆಯ ಅಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಉಡುಪ ಪ್ರಶಸ್ತಿ ನೀಡಿ ಗೌರವಿಸುತ್ತದೆ ಎಂದು ಮೇಳದ ಕಾರ್ಯದರ್ಶಿ ಹಾಗೂ ಉಪನ್ಯಾಸಕ ಸುಜಯೀಂದ್ರ ಹಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಲಿಗ್ರಾಮದಲ್ಲಿ ಬುಧವಾರ ನಡೆದ ಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಉಡುಪ, ಶ್ರೀಧರ ಹಂದೆ, ಬಲರಾಮ ಕಲ್ಕೂರ ಅವರನ್ನೊಳಗೊಂಡ ಆಯ್ಕೆ ಸಮಿತಿ ಈ ಆಯ್ಕೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT