ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ಸೇನಾ ನೆಲೆ ಮೇಲೆ ಗುಂಡು: ಕದನ ವಿರಾಮ ಉಲ್ಲಂಘಿಸಿದ ಪಾಕ್‌

Last Updated 17 ಮೇ 2014, 19:30 IST
ಅಕ್ಷರ ಗಾತ್ರ

ಜಮ್ಮು(ಐಎಎನ್‌ಎಸ್‌): ಭಾರತದ ಸೇನಾ ನೆಲೆಗಳ ಮೇಲೆ ಪಾಕ್‌ ಯೋಧರು ಶುಕ್ರವಾರ ರಾತ್ರಿ ಗುಂಡಿನ ದಾಳಿ ನಡೆಸಿ, ಕದನವಿರಾಮ­ ಉಲ್ಲಂಘಿಸಿದ್ದಾರೆ.

‘ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ ಬಳಿ ಪಾಕ್‌ ಯೋಧರು ಶುಕ್ರವಾರ ಸಂಜೆ 7.35ಕ್ಕೆ ಗುಂಡಿನ ದಾಳಿ ನಡೆಸಿದರು. ಈ ಗುಂಡಿನ ದಾಳಿಯಲ್ಲಿ ಯಾವುದೇ ಹಾನಿ ಅಥವಾ ಗಾಯಗಳಾಗಿಲ್ಲ’ ಎಂದು ರಕ್ಷಣಾ ಇಲಾಖೆ ವಕ್ತಾರ ಕರ್ನಲ್‌ ಮನೀಶ್‌ ಮೆಹ್ತಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

‘ಪಾಕ್‌ ಯೋಧರು ಸಣ್ಣ ಪ್ರಮಾಣದ  ಮತ್ತು ಸ್ವಯಂಚಾಲಿತ ಬಂದೂಕು­ಗಳನ್ನು ಬಳಸಿ ಗುಂಡಿನ ದಾಳಿ ಮಾಡಿ­ದರು. ಇದಕ್ಕೆ ಪ್ರತಿಯಾಗಿ ಭಾರತದ ಯೋಧರು ಸಹ ಗುಂಡಿನ ಉತ್ತರ ನೀಡಿದರು’ ಎಂದು ಮೆಹ್ತಾ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT