ಬೆಂಗಳೂರು: ‘ಪ್ರಕೃತಿ ಕುರಿತ ಅದ್ಯಮ ಕುತೂಹಲದಷ್ಟೇ ಯಂತ್ರ ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರು ಬಹುತೇಕ ಬರಹಗಾರರಿಗಿಂತ ಭಿನ್ನವಾಗಿ ಯೋಚಿಸಿ, ಅದರಂತೆಯೇ ಬದುಕಿದ್ದರು’ ಎಂದು ವಿಮರ್ಶಕ ಡಾ.ಸಿ.ಎನ್.ರಾಮಚಂದ್ರನ್ ಅಭಿಪ್ರಾಯಪಟ್ಟರು.
ಸಪ್ನ ಬುಕ್ ಹೌಸ್ ನಗರದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಬುಕ್ ಹೌಸ್ನ ಕನ್ನಡ ವಿಭಾಗದ ಮುಖ್ಯಸ್ಥ ಆರ್.ದೊಡ್ಡೆಗೌಡ ಅವರು ಸಂಪಾದಿಸಿದ ‘ತೇಜಸ್ವಿಯನ್ನು ಹುಡುಕುತ್ತಾ...’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.