ಬೆಂಗಳೂರು: ನೇಪಾಳದ ಭೂಕಂಪ ಸಂತ್ರಸ್ತರಿಗೆ ನೆರವಾಗಲು ಪ್ರಧಾನಮಂತ್ರಿ ಅವರ ವಿಪತ್ತು ನಿರ್ವಹಣಾ ನಿಧಿಗೆ ಒಂದು ತಿಂಗಳ ವೇತನವನ್ನು ನೀಡುವುದಾಗಿ ಕೇಂದ್ರ ಸಚಿವ ಅನಂತಕುಮಾರ್ ಪ್ರಕಟಿಸಿದರು.
ಸಮರ್ಥನಂ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ ನಮನ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು.