ನವದೆಹಲಿ (ಪಿಟಿಐ): ಆಮ್ ಆದ್ಮಿ ಪಕ್ಷದ (ಎಎಪಿ) ಭಿನ್ನಮತೀಯ ನಾಯಕರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಪದಚ್ಯುತಗೊಳಿಸಲಾಗಿದೆ.
ಕಾಲಿಸ್ತಾ ರೆಸಾರ್ಟ್ನಲ್ಲಿ ಶನಿವಾರ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜತೆಗೆ ಶಾಂತಿ ಭೂಷಣ್, ಅಜಿತ್ ಝಾ ಮತ್ತು ಪ್ರೊ. ಆನಂದ್ ಕುಮಾರ್ ಅವರನ್ನು ಸಹ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಿಂದ ಕೈ ಬಿಡಲು ತೀರ್ಮಾನಿಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.