<p><strong>ನವದೆಹಲಿ (ಪಿಟಿಐ): </strong>ಭೂ ಸ್ವಾಧೀನ ಸುಗ್ರೀವಾಜ್ಞೆ ವಿರೋಧಿಸಿ ಸೋಮವಾರ ಎರಡು ದಿನಗಳ ಸತ್ಯಾಗ್ರಹ ಆರಂಭಿಸಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಮೋದಿ ಸರ್ಕಾರವು ರೈತ ವಿರೋಧಿ ಧೋರಣೆ ಹೊಂದಿದೆ ಎಂದು ಆರೋಪಿಸಿದ್ದಾರೆ.</p>.<p>ಕಾಕತಾಳೀಯ ಎಂಬಂತೆ ಸಂಸತ್ತಿನ ಬಜೆಟ್ ಅಧಿವೇಶನದ ಆರಂಭದ ದಿನವೇ ಹಜಾರೆ ಅವರ ಹೋರಾಟವೂ ಶುರುವಾಗಿದೆ.</p>.<p>ಇಲ್ಲಿನ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಸತ್ಯಾಗ್ರಹದಲ್ಲಿ 77 ವರ್ಷದ ಹಜಾರೆ ಅವರಿಗೆ ನರ್ಮದಾ ಬಚಾವೋ ಆಂದೋಲನ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹಾಗೂ ನೂರಾರು ಬೆಂಬಲಿಗರು ಸಾಥ್ ನೀಡಿದ್ದಾರೆ.</p>.<p>‘ರೈತರ ಒಪ್ಪಿಗೆ ಇಲ್ಲದೇ ನೀವು ಅದ್ಹೇಗೆ ಭೂಮಿಯನ್ನು ಪಡೆಯುತ್ತೀರಿ? ಭಾರತವು ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಸರ್ಕಾರವು ರೈತರ ಬಗ್ಗೆ ಕಾಳಜಿ ವಹಿಸಬೇಕು. ಭೂಸ್ವಾಧೀನ ಸುಗ್ರೀವಾಜ್ಞೆಯು ಪ್ರಜಾಪ್ರಭುತ್ವ ವಿರೋಧಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಅಲ್ಲದೇ, ‘ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಸರ್ಕಾರ ನಡೆಯಲು ಸಾಧ್ಯವಿಲ್ಲ. ಇದು ಭಾರತೀಯ ಜನರ ಸರ್ಕಾರ. ಇಂಗ್ಲೆಂಡ್ ಅಥವಾ ಅಮೆರಿಕದ ಸರ್ಕಾರವಲ್ಲ. ಜನರು ಮಾಡಿರುವ ಸರ್ಕಾರ’ ಎಂದರು.</p>.<p>ಎಎಪಿ ಅಥವಾ ಕಾಂಗ್ರೆಸ್ಗೆ ಈ ಹೋರಾಟದ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದಿರುವ ಹಜಾರೆ, ಉಭಯ ಪಕ್ಷಗಳು ಶ್ರೀಸಾಮಾನ್ಯರಾಗಿ ಹೋರಾಟದಲ್ಲಿ ಪಾಲ್ಗೊಳ್ಳಬಹುದು ಎಂದಿದ್ದಾರೆ.</p>.<p>ಸರ್ಕಾರವು ರೈತರ ಬೇಡಿಕೆಗಳಿಗೆ ಶೀಘ್ರವೇ ಗಮನ ನೀಡದ ಪಕ್ಷದಲ್ಲಿ ಈ ಹೋರಾಟವನ್ನು ದೇಶದ ಪ್ರತಿ ಜಿಲ್ಲೆಗೂ ಕೊಂಡೊಯ್ದು ಮತ್ತೆ ರಾಮಲೀಲಾ ಮೈದಾನಕ್ಕೆ ಮರಳಿ ಬರುವುದಾಗಿ ಹಜಾರೆ ಎಚ್ಚರಿಸಿದ್ದಾರೆ.</p>.<p>‘ಈ ಬಗ್ಗೆ ಹಳ್ಳಿಗಳಲ್ಲಿರುವ ಜನರಿಗೆ ಈಗಲೂ ಮಾಹಿತಿಯಿಲ್ಲ. ಇದೀಗ ನಾವು ಎಲ್ಲಾ ರಾಜ್ಯಗಳು ಹಾಗೂ ಜಿಲ್ಲೆಗಳ ಜನತೆಗೆ ಈ ಸುಗ್ರೀವಾಜ್ಞೆಯ ಬಗ್ಗೆ ಅರಿವು ಮೂಡಿಸುತ್ತೇವೆ. ಪ್ರತಿಯೊಂದು ಜಿಲ್ಲೆಗೂ ಭೇಟಿ ನೀಡುವ ಅಗತ್ಯವಿದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಭೂ ಸ್ವಾಧೀನ ಸುಗ್ರೀವಾಜ್ಞೆ ವಿರೋಧಿಸಿ ಸೋಮವಾರ ಎರಡು ದಿನಗಳ ಸತ್ಯಾಗ್ರಹ ಆರಂಭಿಸಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ಮೋದಿ ಸರ್ಕಾರವು ರೈತ ವಿರೋಧಿ ಧೋರಣೆ ಹೊಂದಿದೆ ಎಂದು ಆರೋಪಿಸಿದ್ದಾರೆ.</p>.<p>ಕಾಕತಾಳೀಯ ಎಂಬಂತೆ ಸಂಸತ್ತಿನ ಬಜೆಟ್ ಅಧಿವೇಶನದ ಆರಂಭದ ದಿನವೇ ಹಜಾರೆ ಅವರ ಹೋರಾಟವೂ ಶುರುವಾಗಿದೆ.</p>.<p>ಇಲ್ಲಿನ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಸತ್ಯಾಗ್ರಹದಲ್ಲಿ 77 ವರ್ಷದ ಹಜಾರೆ ಅವರಿಗೆ ನರ್ಮದಾ ಬಚಾವೋ ಆಂದೋಲನ ಹೋರಾಟಗಾರ್ತಿ ಮೇಧಾ ಪಾಟ್ಕರ್ ಹಾಗೂ ನೂರಾರು ಬೆಂಬಲಿಗರು ಸಾಥ್ ನೀಡಿದ್ದಾರೆ.</p>.<p>‘ರೈತರ ಒಪ್ಪಿಗೆ ಇಲ್ಲದೇ ನೀವು ಅದ್ಹೇಗೆ ಭೂಮಿಯನ್ನು ಪಡೆಯುತ್ತೀರಿ? ಭಾರತವು ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಸರ್ಕಾರವು ರೈತರ ಬಗ್ಗೆ ಕಾಳಜಿ ವಹಿಸಬೇಕು. ಭೂಸ್ವಾಧೀನ ಸುಗ್ರೀವಾಜ್ಞೆಯು ಪ್ರಜಾಪ್ರಭುತ್ವ ವಿರೋಧಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಅಲ್ಲದೇ, ‘ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಸರ್ಕಾರ ನಡೆಯಲು ಸಾಧ್ಯವಿಲ್ಲ. ಇದು ಭಾರತೀಯ ಜನರ ಸರ್ಕಾರ. ಇಂಗ್ಲೆಂಡ್ ಅಥವಾ ಅಮೆರಿಕದ ಸರ್ಕಾರವಲ್ಲ. ಜನರು ಮಾಡಿರುವ ಸರ್ಕಾರ’ ಎಂದರು.</p>.<p>ಎಎಪಿ ಅಥವಾ ಕಾಂಗ್ರೆಸ್ಗೆ ಈ ಹೋರಾಟದ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದಿರುವ ಹಜಾರೆ, ಉಭಯ ಪಕ್ಷಗಳು ಶ್ರೀಸಾಮಾನ್ಯರಾಗಿ ಹೋರಾಟದಲ್ಲಿ ಪಾಲ್ಗೊಳ್ಳಬಹುದು ಎಂದಿದ್ದಾರೆ.</p>.<p>ಸರ್ಕಾರವು ರೈತರ ಬೇಡಿಕೆಗಳಿಗೆ ಶೀಘ್ರವೇ ಗಮನ ನೀಡದ ಪಕ್ಷದಲ್ಲಿ ಈ ಹೋರಾಟವನ್ನು ದೇಶದ ಪ್ರತಿ ಜಿಲ್ಲೆಗೂ ಕೊಂಡೊಯ್ದು ಮತ್ತೆ ರಾಮಲೀಲಾ ಮೈದಾನಕ್ಕೆ ಮರಳಿ ಬರುವುದಾಗಿ ಹಜಾರೆ ಎಚ್ಚರಿಸಿದ್ದಾರೆ.</p>.<p>‘ಈ ಬಗ್ಗೆ ಹಳ್ಳಿಗಳಲ್ಲಿರುವ ಜನರಿಗೆ ಈಗಲೂ ಮಾಹಿತಿಯಿಲ್ಲ. ಇದೀಗ ನಾವು ಎಲ್ಲಾ ರಾಜ್ಯಗಳು ಹಾಗೂ ಜಿಲ್ಲೆಗಳ ಜನತೆಗೆ ಈ ಸುಗ್ರೀವಾಜ್ಞೆಯ ಬಗ್ಗೆ ಅರಿವು ಮೂಡಿಸುತ್ತೇವೆ. ಪ್ರತಿಯೊಂದು ಜಿಲ್ಲೆಗೂ ಭೇಟಿ ನೀಡುವ ಅಗತ್ಯವಿದೆ’ ಎಂದು ಅಭಿಪ್ರಾಯ ಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>